‘ಮಹಾರಾಷ್ಟ್ರದ ರತ್ನಾಗಿರಿ ಬಳಿಯ ವಶಿಷ್ಟಿ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ,ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಮಂಗಳೂರು ಜಂಕ್ಷನ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಲ್ (ಸಿಎಸ್ಎಂಟಿ) ರೈಲಿನ ಮಾರ್ಗವನ್ನು ಬದಲಾಯಿಸಲಾಗಿತ್ತು. ಈ ರೈಲು ದೂಧ್ಸಾಗರ್–ಸೊನಾಲಿಮ್ ನಡುವೆ ಶುಕ್ರವಾರ ಮುಂಜಾನೆ ಹಳಿ ತಪ್ಪಿತ್ತು’ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.