ಬಾದಶಹನಗರ ರೈಲು ನಿಲ್ದಾಣದಲ್ಲಿ ಅರ್ಧ ಗಂಟೆ ರೈಲನ್ನು ನಿಲ್ಲಿಸಿ, ವೈದ್ಯರ ತಂಡ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿತು. ಸ್ಥಳಕ್ಕೆ ಆಗಮಿಸಿದ ತಂಡ, ಅನಾರೋಗ್ಯಕ್ಕೆ ತುತ್ತಾದ ಮೂವರು ಪ್ರಯಾಣಿಕರ ತಪಾಸಣೆ ನಡೆಸಿತು. ಹೊದಿಕೆಯ ದುರ್ವಾಸನೆಯಿಂದಾಗಿ ವಾಕರಿಕೆ ಬರಲಾರಂಭಿಸಿತು ಎಂದು ಪ್ರಯಾಣಿಕರು ವೈದ್ಯರ ತಂಡಕ್ಕೆ ಮಾಹಿತಿ ನೀಡಿದರು.