<p><strong>ಮುಂಬೈ: </strong>ಭಾರಿ ಮಳೆಗೆ ತತ್ತರಿಸಿದ್ದ ವಾಣಿಜ್ಯ ನಗರಿ ಮುಂಬೈನ ಜನಜೀವನಗುರುವಾರ ಯಥಾಸ್ಥಿತಿಗೆ ಮರಳಿದ್ದು, ಸಾರಿಗೆ ಸೇವೆ ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮುಂಬೈನಲ್ಲಿ ಬುಧವಾರ 24 ತಾಸಿನಲ್ಲಿ 256 ಮಿ.ಮೀ. ಮಳೆ ಸುರಿದಿತ್ತು. ಇದರಿಂದಾಗಿ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿತ್ತು. ಹಲವೆಡೆ ಹಳಿಗಳು ಮುಳುಗಡೆಯಾದ ಕಾರಣ, ಉಪನಗರ ರೈಲು ಸೇವೆಯನ್ನು ಕೇಂದ್ರೀಯ ರೈಲ್ವೆ ಹಾಗೂ ಪಶ್ಚಿಮ ರೈಲ್ವೆಯು ಬುಧವಾರ ಸ್ಥಗಿತಗೊಳಿಸಿತ್ತು.</p>.<p>ಹಲವು ರಸ್ತೆಗಳಲ್ಲಿ ನೀರು ತುಂಬಿದ್ದ ಕಾರಣ ಬಸ್ ಸೇವೆಯೂ ಸ್ಥಗಿತವಾಗಿತ್ತು.ಗುರುವಾರ ಮಳೆ ಪ್ರಮಾಣ ಇಳಿಕೆಯಾಗಿದ್ದು, ಮುಂಬೈ ಉಪನಗರದಲ್ಲಿ ಹಾಗೂ ನವಿಮುಂಬೈನಲ್ಲಿ 100 ಮಿ.ಮೀ. ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಉಪನಗರ ರೈಲು ಸೇವೆಯೂ ಪುನರಾರಂಭಗೊಂಡಿದ್ದು, ಅಗತ್ಯ ಸೇವೆಗಳ ಸಿಬ್ಬಂದಿಗಾಗಿ ವಿಶೇಷ ಉಪನಗರ ರೈಲು ಸೇವೆಯನ್ನೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕೇಂದ್ರೀಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಶಿವಾಜಿ ಸುತಾರ್ ತಿಳಿಸಿದ್ದಾರೆ. ಬಸ್ ಸೇವೆಯೂ ಯಥಾಸ್ಥಿತಿಗೆ ಮರಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಭಾರಿ ಮಳೆಗೆ ತತ್ತರಿಸಿದ್ದ ವಾಣಿಜ್ಯ ನಗರಿ ಮುಂಬೈನ ಜನಜೀವನಗುರುವಾರ ಯಥಾಸ್ಥಿತಿಗೆ ಮರಳಿದ್ದು, ಸಾರಿಗೆ ಸೇವೆ ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮುಂಬೈನಲ್ಲಿ ಬುಧವಾರ 24 ತಾಸಿನಲ್ಲಿ 256 ಮಿ.ಮೀ. ಮಳೆ ಸುರಿದಿತ್ತು. ಇದರಿಂದಾಗಿ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿತ್ತು. ಹಲವೆಡೆ ಹಳಿಗಳು ಮುಳುಗಡೆಯಾದ ಕಾರಣ, ಉಪನಗರ ರೈಲು ಸೇವೆಯನ್ನು ಕೇಂದ್ರೀಯ ರೈಲ್ವೆ ಹಾಗೂ ಪಶ್ಚಿಮ ರೈಲ್ವೆಯು ಬುಧವಾರ ಸ್ಥಗಿತಗೊಳಿಸಿತ್ತು.</p>.<p>ಹಲವು ರಸ್ತೆಗಳಲ್ಲಿ ನೀರು ತುಂಬಿದ್ದ ಕಾರಣ ಬಸ್ ಸೇವೆಯೂ ಸ್ಥಗಿತವಾಗಿತ್ತು.ಗುರುವಾರ ಮಳೆ ಪ್ರಮಾಣ ಇಳಿಕೆಯಾಗಿದ್ದು, ಮುಂಬೈ ಉಪನಗರದಲ್ಲಿ ಹಾಗೂ ನವಿಮುಂಬೈನಲ್ಲಿ 100 ಮಿ.ಮೀ. ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಉಪನಗರ ರೈಲು ಸೇವೆಯೂ ಪುನರಾರಂಭಗೊಂಡಿದ್ದು, ಅಗತ್ಯ ಸೇವೆಗಳ ಸಿಬ್ಬಂದಿಗಾಗಿ ವಿಶೇಷ ಉಪನಗರ ರೈಲು ಸೇವೆಯನ್ನೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕೇಂದ್ರೀಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಶಿವಾಜಿ ಸುತಾರ್ ತಿಳಿಸಿದ್ದಾರೆ. ಬಸ್ ಸೇವೆಯೂ ಯಥಾಸ್ಥಿತಿಗೆ ಮರಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>