ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕಸ ಸಂಗ್ರಹಣೆ ವಾಹನದಲ್ಲಿ ತ್ರಿವರ್ಣ ಧ್ವಜ ವಿತರಣೆ ಮಾಡಿರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
ಈ ಕುರಿತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, ಅಯೋಧ್ಯೆ ಮುನ್ಸಿಪಲ್ ಕಾರ್ಪೋರೇಷನ್ ಮೇಯರ್ ಸಮ್ಮುಖದಲ್ಲಿ ರಾಷ್ಟ್ರಧ್ವಜವನ್ನು ಕಸದ ಲಾರಿಯಲ್ಲಿ ಸಾಗಿಸಿ ವಿತರಣೆ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೆಸರಿನಲ್ಲಿ ರಾಷ್ಟ್ರಧ್ವಜಕ್ಕೆ ಈ ರೀತಿ ಅಗೌರವ ತೋರಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ತಿರಂಗಾ ಯಾತ್ರೆ ಸಾಧು, ಸಂತರ ನೇತೃತ್ವದಲ್ಲಿ ನಡೆದಿದ್ದು, ಅಯೋಧ್ಯೆ ಮುನ್ಸಿಪಲ್ ಕಾರ್ಪೋರೇಷನ್ಗೆ ಸೇರಿದ ವಾಹನ ಇದಾಗಿದೆ ಎನ್ನಲಾಗಿದೆ. ಕಾರ್ಯಕ್ರಮದಲ್ಲಿ ಪೊಲೀಸರು, ಅಧಿಕಾರಿಗಳು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.
महापौर की उपस्थिति में अयोध्या नगर निगम द्वारा कूड़ा उठाने वाली गाड़ी से राष्ट्रध्वज पहुंचाने से राष्ट्रध्वज का जो तिरस्कार हुआ है, वो अक्षम्य है।