ಸಚಿವ ಸಂಪುಟದಲ್ಲಿ ಹಿರಿಯ ಸಚಿವರೂ ಆಗಿರುವ ಚಟರ್ಜಿ ಅವರು ’ಟಿಎಂಸಿ ಸರ್ಕಾರವು ಜನಪರವಾದ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದರಿಂದ ಬಿಜೆಪಿಯು ಪಶ್ಚಿಮಬಂಗಾಳದಲ್ಲಿ ನೆಲೆ ಕಳೆದುಕೊಳ್ಳುವ ಭೀತಿಯಲ್ಲಿದೆ. ಹಾಗಾಗಿ ಅವರು ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ‘ ಎಂದು ಹೇಳಿದ್ದಾರೆ.