2014ರಿಂದ 2021ರ ಅವಧಿಯಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ಅಭ್ಯರ್ಥಿಗಳಿಂದ ಟಿಎಂಸಿ ನಾಯಕರು ಹಣ ಪಡೆದಿದ್ದಾರೆ ಎಂಬ ಆರೋಪದಡಿಯಲ್ಲಿ ಸಿಬಿಐ ತನಿಖೆ ನಡೆಸಿತ್ತು. ನಂತದ ದಿನಗಳಲ್ಲಿ ಈ ಪ್ರಕರಣವನ್ನು ಇ.ಡಿಗೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಬಂಧನವಾಗಿದೆ. ಹಲವಾರು ಟಿಎಂಸಿ ನಾಯಕರುಗಳ ಮೇಲೂ ಇ.ಡಿ ದಾಳಿ ನಡೆದಿದೆ.