ಎರಡು ವರ್ಷಗಳ ಹಿಂದೆ ಮುಸ್ಲಿಂ ಮಹಿಳೆಯರ(ವೈವಾಹಿಕ ಹಕ್ಕುಗಳ ರಕ್ಷಣೆ) ಕಾಯ್ದೆ 2019ರಡಿ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದರು. ಈ ಕಾನೂನಿನಡಿ ತ್ರಿವಳಿ ತಲಾಖ್ ಅಥವಾತಲಾಖ್–ಇ–ಬಿದ್ದತ್ ಆಚರಣೆಯನ್ನುಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗಿದ್ದು, ಕಾನೂನು ಉಲ್ಲಂಘಿಸಿದವರು ಮೂರು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೂ ಗುರಿಯಾಗಬಹುದು.