ತ್ರಿಪುರಾ ಸಿಎಂ ವಿಪ್ಲವ್ ಕುಮಾರ್ ದೇವ್ ರಾಜೀನಾಮೆ

ಅಗರ್ತಲಾ: ತ್ರಿಪುರಾ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗವರ್ನರ್ ಅವರಿಗೆ ಬಿಪ್ಲವ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ಬಳಿಕ ವಿಪ್ಲವ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿ ವರಿಷ್ಠರ ನಿರ್ಧಾರವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.
ಬಿಜೆಪಿ ಶಾಸಕರು ತ್ರಿಪುರಾದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತವಡೆ ಅವರನ್ನು ಶಾಸಕಾಂಗ ಪಕ್ಷದ ಸಭೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ..ಬಿಸಿಗಾಳಿಗೆ ರಾಜಸ್ಥಾನ ತತ್ತರ: 13 ಜಿಲ್ಲೆಗಳಲ್ಲಿ 47 ಡಿಗ್ರಿಗೂ ಅಧಿಕ ತಾಪಮಾನ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.