<p><strong>ನವದೆಹಲಿ:</strong> ತ್ರಿಪುರ ವಿಧಾನಸಭೆ ಚುನಾವಣೆ ಇಂದು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಟ್ವಿಟರ್ನಲ್ಲಿ ಮತಯಾಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ಬಿಜೆಪಿ ಪಕ್ಷಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಿಲೀಪ್ ಸೈಕಿಯಾ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ.</p>.<p>ಇದನ್ನೂ ಓದಿ: <a href="https://www.prajavani.net/india-news/delhi-excise-scam-case-court-dismisses-bail-pleas-of-five-accused-1015874.html" itemprop="url">ದೆಹಲಿ ಅಬಕಾರಿ ಹಗರಣ: ಐವರು ಆರೋಪಿಗಳ ಜಾಮೀನು ಅರ್ಜಿ ವಜಾ </a></p>.<p>60 ಸದಸ್ಯ ಬಲದ ತ್ರಿಪುರ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಈಶಾನ್ಯ ರಾಜ್ಯದಲ್ಲಿ ಮತದಾನ ನಡೆಯುತ್ತಿರುವಾಗ ಟ್ವಿಟರ್ನಲ್ಲಿ ಮತ ಯಾಚಿಸಿದ್ದು, ಚುನಾವಣಾ ನಿಯಮ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.</p>.<p>ಅಲ್ಲದೆ ಶುಕ್ರವಾರ ಸಂಜೆ 5 ಗಂಟೆಯೊಳಗೆ ಉತ್ತರಿಸುವಂತೆ ತಿಳಿಸಲಾಗಿದೆ.</p>.<p>ಉತ್ತಮ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ಹಾಕಿ ಎಂದು ಬಿಜೆಪಿಯ ಟ್ವಿಟರ್ ಪೇಜ್ನಲ್ಲಿ ಪೋಸ್ಟ್ ಮಾಡಲಾಗಿತ್ತು. ಮತ್ತೊಂದೆಡೆ ಕಾಂಗ್ರೆಸ್ ಟ್ವೀಟ್ನಲ್ಲಿ, ತ್ರಿಪುರದ ಜನತೆ ಕಾಂಗ್ರೆಸ್ಗೆ ಮತ ಚಲಾಯಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಬರಲಿದೆ ಎಂದು ಉಲ್ಲೇಖ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತ್ರಿಪುರ ವಿಧಾನಸಭೆ ಚುನಾವಣೆ ಇಂದು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಟ್ವಿಟರ್ನಲ್ಲಿ ಮತಯಾಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ಬಿಜೆಪಿ ಪಕ್ಷಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಿಲೀಪ್ ಸೈಕಿಯಾ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ.</p>.<p>ಇದನ್ನೂ ಓದಿ: <a href="https://www.prajavani.net/india-news/delhi-excise-scam-case-court-dismisses-bail-pleas-of-five-accused-1015874.html" itemprop="url">ದೆಹಲಿ ಅಬಕಾರಿ ಹಗರಣ: ಐವರು ಆರೋಪಿಗಳ ಜಾಮೀನು ಅರ್ಜಿ ವಜಾ </a></p>.<p>60 ಸದಸ್ಯ ಬಲದ ತ್ರಿಪುರ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಈಶಾನ್ಯ ರಾಜ್ಯದಲ್ಲಿ ಮತದಾನ ನಡೆಯುತ್ತಿರುವಾಗ ಟ್ವಿಟರ್ನಲ್ಲಿ ಮತ ಯಾಚಿಸಿದ್ದು, ಚುನಾವಣಾ ನಿಯಮ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.</p>.<p>ಅಲ್ಲದೆ ಶುಕ್ರವಾರ ಸಂಜೆ 5 ಗಂಟೆಯೊಳಗೆ ಉತ್ತರಿಸುವಂತೆ ತಿಳಿಸಲಾಗಿದೆ.</p>.<p>ಉತ್ತಮ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ಹಾಕಿ ಎಂದು ಬಿಜೆಪಿಯ ಟ್ವಿಟರ್ ಪೇಜ್ನಲ್ಲಿ ಪೋಸ್ಟ್ ಮಾಡಲಾಗಿತ್ತು. ಮತ್ತೊಂದೆಡೆ ಕಾಂಗ್ರೆಸ್ ಟ್ವೀಟ್ನಲ್ಲಿ, ತ್ರಿಪುರದ ಜನತೆ ಕಾಂಗ್ರೆಸ್ಗೆ ಮತ ಚಲಾಯಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಬರಲಿದೆ ಎಂದು ಉಲ್ಲೇಖ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>