ಜೈಪುರ: ರಾಜ್ಯಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರಿಗೆ ಮತ್ತೆ ಭಿನ್ನಮತ ಕಾಟ ಎದುರಾಗಿದೆ. ಕ್ರೀಡಾ ಸಚಿವ ಅಶೋಕ್ ಚಂದನ ಅವರು ಮುಖ್ಯಮಂತ್ರಿಗಳ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದು, ‘ಅಗೌರವ’ದ ಸಚಿವ ಸ್ಥಾನದಿಂದ ಮುಕ್ತಗೊಳಿಸುವಂತೆ ಕೋರಿದ್ದಾರೆ.
‘ಅಗೌರವದ ಸಚಿವ ಸ್ಥಾನದಿಂದ ನನ್ನನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದೇನೆ. ನನ್ನ ಇಲಾಖೆಯ ಎಲ್ಲ ಅಧಿಕಾರವನ್ನು ಕುಲದೀಪ್ ರಂಕಾ ಅವರಿಗೆ ನೀಡಿ. ಹೇಗೂ ಎಲ್ಲ ಇಲಾಖೆಗಳನ್ನು ಅವರೇ ಹೊಂದಿದ್ದಾರೆ’ ಎಂದು ಅಶೋಕ್ ಚಂದನ ಟ್ವೀಟ್ ಮಾಡಿದ್ದಾರೆ.
माननीय मुख्यमंत्री जी मेरा आपसे व्यक्तिगत अनुरोध है की मुझे इस ज़लालत भरे मंत्री पद से मुक्त कर मेरे सभी विभागों का चार्ज श्री कुलदीप रांका जी को दे दिया जाए, क्योंकि वैसे भी वो ही सभी विभागों के मंत्री है। धन्यवाद
ಕುಲದೀಪ್ ರಂಕಾ ಮುಖ್ಯಮಂತ್ರಿಗಳ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಈ ಬೆಳವಣಿಗೆ ನಡೆದಿದ್ದು, ಪಕ್ಷದೊಳಗೆ ಅಸಮಾಧಾನದ ಹೊಗೆಯಾಡುತ್ತಿರುವುದು ಬಹಿರಂಗವಾಗಿದೆ. ವಾರದ ಹಿಂದಷ್ಟೇ, ಡಂಗರ್ಪುರದ ಶಾಸಕ ಗಣೇಶ್ ಘೋಘರ ತಮ್ಮ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಪ್ರತಿಭಟಿಸಿ ರಾಜೀನಾಮೆ ನೀಡಿದ್ದರು.