ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶೋಕ್ ಗೆಹಲೋತ್‌ಗೆ ಮತ್ತೆ ಇಕ್ಕಟ್ಟು: ಸಚಿವ ಅಶೋಕ್ ಚಂದನ ಬಹಿರಂಗ ಅಸಮಾಧಾನ

Last Updated 27 ಮೇ 2022, 2:10 IST
ಅಕ್ಷರ ಗಾತ್ರ

ಜೈಪುರ: ರಾಜ್ಯಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರಿಗೆ ಮತ್ತೆ ಭಿನ್ನಮತ ಕಾಟ ಎದುರಾಗಿದೆ. ಕ್ರೀಡಾ ಸಚಿವ ಅಶೋಕ್ ಚಂದನ ಅವರು ಮುಖ್ಯಮಂತ್ರಿಗಳ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದು, ‘ಅಗೌರವ’ದ ಸಚಿವ ಸ್ಥಾನದಿಂದ ಮುಕ್ತಗೊಳಿಸುವಂತೆ ಕೋರಿದ್ದಾರೆ.

‘ಅಗೌರವದ ಸಚಿವ ಸ್ಥಾನದಿಂದ ನನ್ನನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದೇನೆ. ನನ್ನ ಇಲಾಖೆಯ ಎಲ್ಲ ಅಧಿಕಾರವನ್ನು ಕುಲದೀಪ್ ರಂಕಾ ಅವರಿಗೆ ನೀಡಿ. ಹೇಗೂ ಎಲ್ಲ ಇಲಾಖೆಗಳನ್ನು ಅವರೇ ಹೊಂದಿದ್ದಾರೆ’ ಎಂದು ಅಶೋಕ್ ಚಂದನ ಟ್ವೀಟ್ ಮಾಡಿದ್ದಾರೆ.

ಕುಲದೀಪ್ ರಂಕಾ ಮುಖ್ಯಮಂತ್ರಿಗಳ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಈ ಬೆಳವಣಿಗೆ ನಡೆದಿದ್ದು, ಪಕ್ಷದೊಳಗೆ ಅಸಮಾಧಾನದ ಹೊಗೆಯಾಡುತ್ತಿರುವುದು ಬಹಿರಂಗವಾಗಿದೆ. ವಾರದ ಹಿಂದಷ್ಟೇ, ಡಂಗರ್‌ಪುರದ ಶಾಸಕ ಗಣೇಶ್ ಘೋಘರ ತಮ್ಮ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಪ್ರತಿಭಟಿಸಿ ರಾಜೀನಾಮೆ ನೀಡಿದ್ದರು.

ಈ ಮಧ್ಯೆ, ಚಂದನ ಅವರ ಟ್ವೀಟ್‌ ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

‘ಈ ಹಡಗು (ಕಾಂಗ್ರೆಸ್) ಮುಳುಗುತ್ತಿದೆ. 2023ರ ಟ್ರೆಂಡ್ ಈಗಲೇ ಆರಂಭವಾಗಿದೆ’ ಎಂದು ಬಿಜೆಪಿಯ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT