<p><strong>ಮುಂಬೈ:</strong> ‘ಟಿಆರ್ಪಿ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವುದಾದರೆ, ಆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಎಂಟು ವ್ಯಕ್ತಿಗಳಿಗೆ ನೀಡಿದಂತೆ, ಇವರಿಗೂ ಮೊದಲು ಸಮನ್ಸ್ ಜಾರಿಗೊಳಿಸಬೇಕು‘ ಎಂದು ಬಾಂಬೆ ಹೈಕೋರ್ಟ್ಮುಂಬೈ ಪೊಲೀಸರಿಗೆ ತಿಳಿಸಿದೆ.</p>.<p>ನ್ಯಾಯಮೂರ್ತಿ ಎಸ್.ಎಸ್.ಶಿಂಧೆ ಮತ್ತು ಎಂ.ಎಸ್.ಕಾರ್ನಿಕ್ ಅವರನ್ನೊಳಗೊಂಡ ವಿಭಾಗೀಯ ಪೀಠ, ‘ಸಮನ್ಸ್ ಜಾರಿಗೊಳಿಸಿದ ಮೇಲೆ ಗೋಸ್ವಾಮಿ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸಬೇಕು‘ ಎಂದೂ ಹೇಳಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ನವೆಂಬರ್ 5ರೊಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ.</p>.<p>‘ಎಫ್ಐಆರ್ ಎಂಬುದು ವಿಶ್ವಕೋಶವಲ್ಲ. ನಾವು ಮೊದಲು ತನಿಖಾ ವರದಿಗಳನ್ನು ಪರಿಶೀಲಿಸಬೇಕು. ಇಲ್ಲಿಂದ ಮುಂದಿನ ವಿಚಾರಣೆವರೆಗೆ ಯಾವ ರೀತಿ ತನಿಖೆ ನಡೆದಿದೆ ಎಂದು ಗಮನಿಸಬೇಕಿದೆ‘ ಎಂದು ನ್ಯಾಯಪೀಠ ಹೇಳಿದೆ.</p>.<p>ನ್ಯಾಯಾಲಯ, ಅ.6ರಂದು ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ರಿಪಬ್ಲಿಕ್ ಟಿವಿಯ ಮಾಲೀಕರಾದ ಆರ್ಜಿ ಔಟ್ಲಿಯರ್ ಮೀಡಿಯಾ ಪ್ರೈ. ಲಿ. ನವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದೆ.</p>.<p>ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ, ಗೋಸ್ವಾಮಿ ಅವರನ್ನು ಬಂಧಿಸದಂತೆ ರಕ್ಷಣೆ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು. ‘ಪೊಲೀಸರು ಗೋಸ್ವಾಮಿ ಅವರನ್ನು ಗುರಿಯಾಗಿಸಿದ್ದಾರೆ, ಅವರನ್ನು ಬಂಧಿಸುವ ಶಂಕೆ ಇದೆ‘ ಎಂದು ಸಾಳ್ವೆ ಹೇಳಿದರು</p>.<p>ಮಹಾರಾಷ್ಟ್ರ ಸರ್ಕಾರ ಮತ್ತು ಪೊಲೀಸರ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ‘ಈ ಪ್ರಕರಣದಲ್ಲಿ ಗೋಸ್ವಾಮಿಯನ್ನು ಆರೋಪಿ ಎಂದು ಹೆಸರಿಸಿಲ್ಲ. ಹಾಗಾಗಿ ಅವರಿಗೆ ರಕ್ಷಣೆ ನೀಡುವ ಯಾವುದೇ ಆದೇಶದ ಅಗತ್ಯವೂ ಇಲ್ಲ‘ ಎಂದು ಹೇಳಿದರು.</p>.<p>‘ಟಿಆರ್ಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಗೆ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ ಮತ್ತು ಅವರನ್ನು ಪ್ರಶ್ನಿಸಿದ್ದಾರೆ. ಆದರೆ ಯಾರನ್ನೂ ಬಂಧಿಸಲಾಗಿಲ್ಲ‘ ಎಂದು ಸಿಬಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಟಿಆರ್ಪಿ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವುದಾದರೆ, ಆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಎಂಟು ವ್ಯಕ್ತಿಗಳಿಗೆ ನೀಡಿದಂತೆ, ಇವರಿಗೂ ಮೊದಲು ಸಮನ್ಸ್ ಜಾರಿಗೊಳಿಸಬೇಕು‘ ಎಂದು ಬಾಂಬೆ ಹೈಕೋರ್ಟ್ಮುಂಬೈ ಪೊಲೀಸರಿಗೆ ತಿಳಿಸಿದೆ.</p>.<p>ನ್ಯಾಯಮೂರ್ತಿ ಎಸ್.ಎಸ್.ಶಿಂಧೆ ಮತ್ತು ಎಂ.ಎಸ್.ಕಾರ್ನಿಕ್ ಅವರನ್ನೊಳಗೊಂಡ ವಿಭಾಗೀಯ ಪೀಠ, ‘ಸಮನ್ಸ್ ಜಾರಿಗೊಳಿಸಿದ ಮೇಲೆ ಗೋಸ್ವಾಮಿ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸಬೇಕು‘ ಎಂದೂ ಹೇಳಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ನವೆಂಬರ್ 5ರೊಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ.</p>.<p>‘ಎಫ್ಐಆರ್ ಎಂಬುದು ವಿಶ್ವಕೋಶವಲ್ಲ. ನಾವು ಮೊದಲು ತನಿಖಾ ವರದಿಗಳನ್ನು ಪರಿಶೀಲಿಸಬೇಕು. ಇಲ್ಲಿಂದ ಮುಂದಿನ ವಿಚಾರಣೆವರೆಗೆ ಯಾವ ರೀತಿ ತನಿಖೆ ನಡೆದಿದೆ ಎಂದು ಗಮನಿಸಬೇಕಿದೆ‘ ಎಂದು ನ್ಯಾಯಪೀಠ ಹೇಳಿದೆ.</p>.<p>ನ್ಯಾಯಾಲಯ, ಅ.6ರಂದು ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ರಿಪಬ್ಲಿಕ್ ಟಿವಿಯ ಮಾಲೀಕರಾದ ಆರ್ಜಿ ಔಟ್ಲಿಯರ್ ಮೀಡಿಯಾ ಪ್ರೈ. ಲಿ. ನವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದೆ.</p>.<p>ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ, ಗೋಸ್ವಾಮಿ ಅವರನ್ನು ಬಂಧಿಸದಂತೆ ರಕ್ಷಣೆ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು. ‘ಪೊಲೀಸರು ಗೋಸ್ವಾಮಿ ಅವರನ್ನು ಗುರಿಯಾಗಿಸಿದ್ದಾರೆ, ಅವರನ್ನು ಬಂಧಿಸುವ ಶಂಕೆ ಇದೆ‘ ಎಂದು ಸಾಳ್ವೆ ಹೇಳಿದರು</p>.<p>ಮಹಾರಾಷ್ಟ್ರ ಸರ್ಕಾರ ಮತ್ತು ಪೊಲೀಸರ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ‘ಈ ಪ್ರಕರಣದಲ್ಲಿ ಗೋಸ್ವಾಮಿಯನ್ನು ಆರೋಪಿ ಎಂದು ಹೆಸರಿಸಿಲ್ಲ. ಹಾಗಾಗಿ ಅವರಿಗೆ ರಕ್ಷಣೆ ನೀಡುವ ಯಾವುದೇ ಆದೇಶದ ಅಗತ್ಯವೂ ಇಲ್ಲ‘ ಎಂದು ಹೇಳಿದರು.</p>.<p>‘ಟಿಆರ್ಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಗೆ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ ಮತ್ತು ಅವರನ್ನು ಪ್ರಶ್ನಿಸಿದ್ದಾರೆ. ಆದರೆ ಯಾರನ್ನೂ ಬಂಧಿಸಲಾಗಿಲ್ಲ‘ ಎಂದು ಸಿಬಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>