<p><strong>ಹೈದರಾಬಾದ್:</strong> ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ನಾಚಿಕೆಗೇಡಿನ ಸಂಗತಿ ಎಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ನಾಯಕಿ ಕೆ.ಕವಿತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯೂ ಆಗಿರುವ ಕವಿತಾ ಮನವಿ ಮಾಡಿದ್ದಾರೆ.</p>.<p>‘ಅತ್ಯಾಚಾರ ಹಾಗೂ ಕೊಲೆಯಂತಹ ಘೋರ ಅಪರಾಧಗಳನ್ನು ಎಸಗಿದವರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಬಿಡುಗಡೆಯ ಭಾಗ್ಯ ದೊರೆತಿದೆ. ಈ ನಿರ್ಧಾರವು ಸ್ವಾತಂತ್ರ್ಯ ದಿನದ ದೈವತ್ವಕ್ಕೆ ಕಳಂಕ ತಂದಿದೆ’ ಎಂದು ತೆಲಂಗಾಣ ವಿಧಾನ ಪರಿಷತ್ ಸದಸ್ಯರೂ ಆಗಿರುವ ಕವಿತಾ ವಾಗ್ದಾಳಿ ನಡೆಸಿದ್ದಾರೆ.</p>.<p>ನಾಗರಿಕರು ಕಾನೂನಿನ ಮೇಲಿನ ನಂಬಿಕೆ ಕಳೆದುಕೊಳ್ಳಬಾರದು. ಬಿಲ್ಕಿಸ್ ಬಾನು ಅನುಭವಿಸಿದ್ದನ್ನು ಬೇರೆ ಮಹಿಳೆ ಅನುಭವಿಸಬಾರದು. ಈ ನಾಚಿಕೆಗೇಡಿನ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.</p>.<p>ಅತ್ಯಾಚಾರಿಗಳು ಹಾಗೂ ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳಿಗೆ ಕ್ಷಮಾದಾನ ನೀಡಬಾರದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ನೀಡಿದ್ದರೂ ಈ ಘಟನೆ ನಡೆದಿದೆ ಎಂಬುದಾಗಿ ಅವರು ಹೇಳಿದ್ದಾರೆ.</p>.<p>'ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮತ್ತು ಆಕೆಯ 3 ವರ್ಷದ ಮಗುವಿನ ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಗುಜರಾತ್ನ ಬಿಜೆಪಿ ಸರ್ಕಾರವು ಅಮಾನವೀಯತೆಯನ್ನು ಪ್ರದರ್ಶಿಸಿದೆ. ಇದು ಕಾನೂನು ಹಾಗೂ ಮಾನವೀಯತೆಯ ವಿರುದ್ಧವಾಗಿದೆ' ಎಂದು ಹರಿಹಾಯ್ದಿದ್ದಾರೆ.</p>.<p>‘ಜೈಲಿನಿಂದ ಬಿಡುಗಡೆಯಾದ ನಂತರ ಅತ್ಯಾಚಾರಿಗಳಿಗೆ ಸಿಕ್ಕ ಸ್ವಾಗತವು ನ್ಯಾಯಯುತ ಸಮಾಜದ ಮುಖದ ಮೇಲೆ ಹೊಡೆದಂತಹ ಘಟನೆಯಾಗಿದೆ. ಈ ಅಪಾಯಕಾರಿ ಬೆಳವಣಿಗೆ ಪರಂಪರೆಯ ರೂಪವನ್ನು ಪಡೆಯುವ ಮೊದಲು ಇದನ್ನು ನಿಲ್ಲಿಸುವುದು ನಮ್ಮ ಕರ್ತವ್ಯವಾಗಿದೆ‘ ಕವಿತಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/are-you-not-ashamed-of-such-politics-rahul-gandhi-attacks-pm-narendra-modi-on-bjps-support-to-rape-964265.html" target="_blank"><strong>ಗುಜರಾತ್ನಲ್ಲಿ ಅತ್ಯಾಚಾರಿಗಳ ಬಿಡುಗಡೆ: ಪಿಎಂ ಮೋದಿ ವಿರುದ್ಧ ರಾಹುಲ್ ಕಿಡಿ</strong></a><br /><br />ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಮತ್ತು ಅವರ ಕುಟುಂಬದ 7 ಮಂದಿಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳಿಗೆ ಗುಜರಾತ್ ಸರ್ಕಾರವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನದಂದು ಶಿಕ್ಷೆ ಅವಧಿ ಕಡಿತಗೊಳಿಸಿ, ಬಿಡುಗಡೆ ಮಾಡಿತ್ತು.</p>.<p>ಬಿಲ್ಕಿಸ್ ಬಾನು ಮೇಲೆ 2002ರ ಗೋಧ್ರಾ ಹತ್ಯಾಕಾಂಡದ ನಂತರದಲ್ಲಿ 11 ಮಂದಿ ಅತ್ಯಾಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು 5 ತಿಂಗಳ ಗರ್ಭಿಣಿ ಆಗಿದ್ದರು. ಅಪರಾಧಿಗಳನ್ನು ಸ್ವಾಂತಂತ್ರ್ಯದ ದಿನವೇ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಕ್ರಮವನ್ನು ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ಖಂಡಿಸಿದ್ದಾರೆ.</p>.<p>ಈ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಆರೋಪದ ಮೇಲೆ 11 ಮಂದಿಗೆ 2008ರ ಜ.21 ಮುಂಬೈ ವಿಶೇಷ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ನಾಚಿಕೆಗೇಡಿನ ಸಂಗತಿ ಎಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ನಾಯಕಿ ಕೆ.ಕವಿತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯೂ ಆಗಿರುವ ಕವಿತಾ ಮನವಿ ಮಾಡಿದ್ದಾರೆ.</p>.<p>‘ಅತ್ಯಾಚಾರ ಹಾಗೂ ಕೊಲೆಯಂತಹ ಘೋರ ಅಪರಾಧಗಳನ್ನು ಎಸಗಿದವರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಬಿಡುಗಡೆಯ ಭಾಗ್ಯ ದೊರೆತಿದೆ. ಈ ನಿರ್ಧಾರವು ಸ್ವಾತಂತ್ರ್ಯ ದಿನದ ದೈವತ್ವಕ್ಕೆ ಕಳಂಕ ತಂದಿದೆ’ ಎಂದು ತೆಲಂಗಾಣ ವಿಧಾನ ಪರಿಷತ್ ಸದಸ್ಯರೂ ಆಗಿರುವ ಕವಿತಾ ವಾಗ್ದಾಳಿ ನಡೆಸಿದ್ದಾರೆ.</p>.<p>ನಾಗರಿಕರು ಕಾನೂನಿನ ಮೇಲಿನ ನಂಬಿಕೆ ಕಳೆದುಕೊಳ್ಳಬಾರದು. ಬಿಲ್ಕಿಸ್ ಬಾನು ಅನುಭವಿಸಿದ್ದನ್ನು ಬೇರೆ ಮಹಿಳೆ ಅನುಭವಿಸಬಾರದು. ಈ ನಾಚಿಕೆಗೇಡಿನ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.</p>.<p>ಅತ್ಯಾಚಾರಿಗಳು ಹಾಗೂ ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳಿಗೆ ಕ್ಷಮಾದಾನ ನೀಡಬಾರದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ನೀಡಿದ್ದರೂ ಈ ಘಟನೆ ನಡೆದಿದೆ ಎಂಬುದಾಗಿ ಅವರು ಹೇಳಿದ್ದಾರೆ.</p>.<p>'ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮತ್ತು ಆಕೆಯ 3 ವರ್ಷದ ಮಗುವಿನ ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಗುಜರಾತ್ನ ಬಿಜೆಪಿ ಸರ್ಕಾರವು ಅಮಾನವೀಯತೆಯನ್ನು ಪ್ರದರ್ಶಿಸಿದೆ. ಇದು ಕಾನೂನು ಹಾಗೂ ಮಾನವೀಯತೆಯ ವಿರುದ್ಧವಾಗಿದೆ' ಎಂದು ಹರಿಹಾಯ್ದಿದ್ದಾರೆ.</p>.<p>‘ಜೈಲಿನಿಂದ ಬಿಡುಗಡೆಯಾದ ನಂತರ ಅತ್ಯಾಚಾರಿಗಳಿಗೆ ಸಿಕ್ಕ ಸ್ವಾಗತವು ನ್ಯಾಯಯುತ ಸಮಾಜದ ಮುಖದ ಮೇಲೆ ಹೊಡೆದಂತಹ ಘಟನೆಯಾಗಿದೆ. ಈ ಅಪಾಯಕಾರಿ ಬೆಳವಣಿಗೆ ಪರಂಪರೆಯ ರೂಪವನ್ನು ಪಡೆಯುವ ಮೊದಲು ಇದನ್ನು ನಿಲ್ಲಿಸುವುದು ನಮ್ಮ ಕರ್ತವ್ಯವಾಗಿದೆ‘ ಕವಿತಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/are-you-not-ashamed-of-such-politics-rahul-gandhi-attacks-pm-narendra-modi-on-bjps-support-to-rape-964265.html" target="_blank"><strong>ಗುಜರಾತ್ನಲ್ಲಿ ಅತ್ಯಾಚಾರಿಗಳ ಬಿಡುಗಡೆ: ಪಿಎಂ ಮೋದಿ ವಿರುದ್ಧ ರಾಹುಲ್ ಕಿಡಿ</strong></a><br /><br />ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಮತ್ತು ಅವರ ಕುಟುಂಬದ 7 ಮಂದಿಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳಿಗೆ ಗುಜರಾತ್ ಸರ್ಕಾರವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನದಂದು ಶಿಕ್ಷೆ ಅವಧಿ ಕಡಿತಗೊಳಿಸಿ, ಬಿಡುಗಡೆ ಮಾಡಿತ್ತು.</p>.<p>ಬಿಲ್ಕಿಸ್ ಬಾನು ಮೇಲೆ 2002ರ ಗೋಧ್ರಾ ಹತ್ಯಾಕಾಂಡದ ನಂತರದಲ್ಲಿ 11 ಮಂದಿ ಅತ್ಯಾಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು 5 ತಿಂಗಳ ಗರ್ಭಿಣಿ ಆಗಿದ್ದರು. ಅಪರಾಧಿಗಳನ್ನು ಸ್ವಾಂತಂತ್ರ್ಯದ ದಿನವೇ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಕ್ರಮವನ್ನು ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ಖಂಡಿಸಿದ್ದಾರೆ.</p>.<p>ಈ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಆರೋಪದ ಮೇಲೆ 11 ಮಂದಿಗೆ 2008ರ ಜ.21 ಮುಂಬೈ ವಿಶೇಷ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>