<p><strong>ಹೈದರಾಬಾದ್:</strong> ನಗರದ ಎಂ.ಜೆ ಮಾರ್ಕೆಟ್ನಲ್ಲಿ ಶುಕ್ರವಾರ ಸಂಜೆ ನಡೆದ ಗಣೇಶ ಮೆರವಣಿಗೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾಗವಹಿಸಿದ್ದರು.</p>.<p>ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಹಿಮಂತ ಬಿಸ್ವಾ ಶರ್ಮಾ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ನಾಯಕ ನಂದ ಕಿಶೋರ್, ವೇದಿಕೆಯ ಮೇಲೆ ಹೋಗಿ ಮೈಕ್ ಅನ್ನು ಕಿತ್ತೆಸೆದಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.</p>.<p>ಹಿಮಂತ ಬಿಸ್ವಾ ಶರ್ಮಾ ತಮ್ಮ ಭಾಷಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಟೀಕಿಸಿದ್ದರು. ತೆಲಂಗಾಣದಲ್ಲಿ ಒಂದು ಕುಟುಂಬ (ಕೆಸಿಆರ್) ಮಾತ್ರ ಸಂತೋಷವಾಗಿದೆ ಎಂದು ಆರೋಪಿಸಿದ್ದರು.</p>.<p>ತೆಲಂಗಾಣ ಸರ್ಕಾರದ ವಿರುದ್ಧ ಶರ್ಮಾ ಅವರು ನೀಡಿದ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಂದ ಕಿಶೋರ್, ವೇದಿಕೆ ಮೇಲೆ ಬಂದು ಕೆಸಿಆರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರೆ ಸಹಿಸುವುದಿಲ್ಲ ಎಂದು ಕೂಗಾಡಿದ್ದಾರೆ. ಕೂಡಲೇ ವೇದಿಕೆ ಮೇಲಿದ್ದ ಭಾಗ್ಯನಗರ ಗಣೇಶ ಉತ್ಸವ ಸಮಿತಿ (ಬಿಜಿಯುಎಸ್) ಸದಸ್ಯರು ಕಿಶೋರ್ನನ್ನು ಹಿಡಿದಿದ್ದಾರೆ.</p>.<p>ವಾರ್ಷಿಕ ಗಣೇಶ ಮೆರವಣಿಗೆ ವೇಳೆ ಭಕ್ತರಿಂದ ತುಂಬಿ ತುಳುಕುತ್ತಿದ್ದ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಉದ್ವಿಗ್ನತೆಗೆ ಕಾರಣವಾಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ನಂದ ಕಿಶೋರ್ನನ್ನು ವಶಕ್ಕೆ ಪಡೆದಿದ್ದಾರೆ.</p>.<p>ಇದಕ್ಕೂ ಮುನ್ನ ಹಿಮಂತ ಬಿಸ್ವಾ ಶರ್ಮಾ ಅವರು ಚಾರ್ಮಿನಾರ್ನಲ್ಲಿರುವ ಭಾಗ್ಯಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅವರು ಅಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದರು. ಆದರೆ, ಭಾಷಣಕ್ಕೆ ಅನುಮತಿ ಇಲ್ಲ ಎಂಬ ಕಾರಣಕ್ಕಾಗಿ ಪೊಲೀಸರು ಅವರನ್ನು ತಡೆದಿದ್ದರು.</p>.<p><strong>ಓದಿ...<a href="https://www.prajavani.net/karnataka-news/bharat-jodo-yatra-rahul-gandhi-burberry-t-shirt-congress-bjp-politics-970660.html" target="_blank">₹41 ಸಾವಿರ ಬೆಲೆ ಬಾಳುವ ಶರ್ಟ್, ಐಷಾರಾಮಿ ಬಸ್ನಲ್ಲಿ ರಾಹುಲ್ ಯಾತ್ರೆ: ಬಿಜೆಪಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ನಗರದ ಎಂ.ಜೆ ಮಾರ್ಕೆಟ್ನಲ್ಲಿ ಶುಕ್ರವಾರ ಸಂಜೆ ನಡೆದ ಗಣೇಶ ಮೆರವಣಿಗೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾಗವಹಿಸಿದ್ದರು.</p>.<p>ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಹಿಮಂತ ಬಿಸ್ವಾ ಶರ್ಮಾ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ನಾಯಕ ನಂದ ಕಿಶೋರ್, ವೇದಿಕೆಯ ಮೇಲೆ ಹೋಗಿ ಮೈಕ್ ಅನ್ನು ಕಿತ್ತೆಸೆದಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.</p>.<p>ಹಿಮಂತ ಬಿಸ್ವಾ ಶರ್ಮಾ ತಮ್ಮ ಭಾಷಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಟೀಕಿಸಿದ್ದರು. ತೆಲಂಗಾಣದಲ್ಲಿ ಒಂದು ಕುಟುಂಬ (ಕೆಸಿಆರ್) ಮಾತ್ರ ಸಂತೋಷವಾಗಿದೆ ಎಂದು ಆರೋಪಿಸಿದ್ದರು.</p>.<p>ತೆಲಂಗಾಣ ಸರ್ಕಾರದ ವಿರುದ್ಧ ಶರ್ಮಾ ಅವರು ನೀಡಿದ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಂದ ಕಿಶೋರ್, ವೇದಿಕೆ ಮೇಲೆ ಬಂದು ಕೆಸಿಆರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರೆ ಸಹಿಸುವುದಿಲ್ಲ ಎಂದು ಕೂಗಾಡಿದ್ದಾರೆ. ಕೂಡಲೇ ವೇದಿಕೆ ಮೇಲಿದ್ದ ಭಾಗ್ಯನಗರ ಗಣೇಶ ಉತ್ಸವ ಸಮಿತಿ (ಬಿಜಿಯುಎಸ್) ಸದಸ್ಯರು ಕಿಶೋರ್ನನ್ನು ಹಿಡಿದಿದ್ದಾರೆ.</p>.<p>ವಾರ್ಷಿಕ ಗಣೇಶ ಮೆರವಣಿಗೆ ವೇಳೆ ಭಕ್ತರಿಂದ ತುಂಬಿ ತುಳುಕುತ್ತಿದ್ದ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಉದ್ವಿಗ್ನತೆಗೆ ಕಾರಣವಾಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ನಂದ ಕಿಶೋರ್ನನ್ನು ವಶಕ್ಕೆ ಪಡೆದಿದ್ದಾರೆ.</p>.<p>ಇದಕ್ಕೂ ಮುನ್ನ ಹಿಮಂತ ಬಿಸ್ವಾ ಶರ್ಮಾ ಅವರು ಚಾರ್ಮಿನಾರ್ನಲ್ಲಿರುವ ಭಾಗ್ಯಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅವರು ಅಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದರು. ಆದರೆ, ಭಾಷಣಕ್ಕೆ ಅನುಮತಿ ಇಲ್ಲ ಎಂಬ ಕಾರಣಕ್ಕಾಗಿ ಪೊಲೀಸರು ಅವರನ್ನು ತಡೆದಿದ್ದರು.</p>.<p><strong>ಓದಿ...<a href="https://www.prajavani.net/karnataka-news/bharat-jodo-yatra-rahul-gandhi-burberry-t-shirt-congress-bjp-politics-970660.html" target="_blank">₹41 ಸಾವಿರ ಬೆಲೆ ಬಾಳುವ ಶರ್ಟ್, ಐಷಾರಾಮಿ ಬಸ್ನಲ್ಲಿ ರಾಹುಲ್ ಯಾತ್ರೆ: ಬಿಜೆಪಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>