<p><strong>ನವದೆಹಲಿ: </strong>ಆಂಧ್ರಪ್ರದೇಶ ಪುನರ್ರಚನೆ ಮಸೂದೆ ಕುರಿತ ಹೇಳಿಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೆಲಂಗಾಣ ರಾಷ್ಟ್ರೀಯ ಸಮಿತಿಯ (ಟಿಆರ್ಎಸ್) ಸಂಸದರು ರಾಜ್ಯಸಭೆಯಲ್ಲಿ ಗುರುವಾರ ಹಕ್ಕುಚ್ಯುತಿ ಮಂಡನೆಗೆ ಮುಂದಾದರು.</p>.<p>ಆದರೆ, ಉಪಸಭಾಪತಿ ಹರಿವಂಶ ಸಿಂಗ್ ಅವರು ‘ಹಕ್ಕುಚ್ಯುತಿ ಮಂಡನೆಗೆ ಸಂಬಂಧಿಸಿದ ನೋಟಿಸ್ ಅನ್ನು ಗುರುವಾರ ಸ್ವೀಕರಿಸಲಾಗಿದೆ. ಈ ಕುರಿತು ಸಭಾಪತಿ ಅವರೇ ತೀರ್ಮಾನ ತೆಗೆದುಕೊಳ್ಳುವರು. ಹೀಗಾಗಿ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.</p>.<p>ನಂತರ, ಶೂನ್ಯ ವೇಳೆಯಲ್ಲಿ ಸಂಸದ ಕೆ.ಕೇಶವರಾವ್ ಅವರು ಪುನಃ ಈ ವಿಷಯ ಪ್ರಸ್ತಾಪಿಸಲು ಮುಂದಾದರು. ಶೂನ್ಯವೇಳೆಯಲ್ಲಿ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಸಭಾಪತಿ ಹೇಳಿದರು. ಆಗ ಟಿಆರ್ಎಸ್ ಸಂಸದರು ಕೇಶವರಾವ್ ನೇತೃತ್ವದಲ್ಲಿ ಸಭಾಪತಿ ಪೀಠದ ಮುಂದೆ ಪ್ರತಿಭಟನೆ ಆರಂಭಿಸಿದರು.</p>.<p>ನಂತರ, ಸಂಸದರು ಹಕ್ಕುಚ್ಯುತಿಗೆ ಸಂಬಂಧಿಸಿದ ನೋಟಿಸ್ಅನ್ನು ರಾಜ್ಯಸಭಾ ಕಾರ್ಯದರ್ಶಿಗೆ ಸಲ್ಲಿಸಿ, ಸಭಾತ್ಯಾಗ ಮಾಡಿದರು.</p>.<p>ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದ ಪ್ರಧಾನಿ ಮೋದಿ,‘ಆಂಧ್ರಪ್ರದೇಶವನ್ನು ವಿಭಜನೆ ಮಾಡಿದ ರೀತಿ ನಾಚಿಕೆ ತರುವಂತಿತ್ತು. ಧ್ವನಿವರ್ಧಕಗಳನ್ನು ಬಂದ್ ಮಾಡಲಾಗಿತ್ತು, ಕಾರದ ಪುಡಿಯನ್ನು ಎರಚಲಾಗಿತ್ತು. ಚರ್ಚೆಯೂ ನಡೆಯಲಿಲ್ಲ’ ಎಂದಿದ್ದರು.</p>.<p>‘ರಾಜ್ಯವನ್ನು ಈ ರೀತಿ ವಿಭಜಿಸಿದ್ದು ಸರಿಯಾದ ಕ್ರಮವೇ. ಅದು ಪ್ರಜಾಪ್ರಭುತ್ವವೇ’ ಎಂದೂ ಪ್ರಶ್ನಿಸಿದ್ದ ಅವರು, ಈ ವಿಷಯವಾಗಿ ಈಗಲೂ ಆಂಧ್ರಪ್ರದೇಶ ಹಾಗೂ ತೆಲಂಗಾಣ ಮಧ್ಯೆ ಸಂಘರ್ಷ ಇದೆ ಎಂದು ಛೇಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆಂಧ್ರಪ್ರದೇಶ ಪುನರ್ರಚನೆ ಮಸೂದೆ ಕುರಿತ ಹೇಳಿಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೆಲಂಗಾಣ ರಾಷ್ಟ್ರೀಯ ಸಮಿತಿಯ (ಟಿಆರ್ಎಸ್) ಸಂಸದರು ರಾಜ್ಯಸಭೆಯಲ್ಲಿ ಗುರುವಾರ ಹಕ್ಕುಚ್ಯುತಿ ಮಂಡನೆಗೆ ಮುಂದಾದರು.</p>.<p>ಆದರೆ, ಉಪಸಭಾಪತಿ ಹರಿವಂಶ ಸಿಂಗ್ ಅವರು ‘ಹಕ್ಕುಚ್ಯುತಿ ಮಂಡನೆಗೆ ಸಂಬಂಧಿಸಿದ ನೋಟಿಸ್ ಅನ್ನು ಗುರುವಾರ ಸ್ವೀಕರಿಸಲಾಗಿದೆ. ಈ ಕುರಿತು ಸಭಾಪತಿ ಅವರೇ ತೀರ್ಮಾನ ತೆಗೆದುಕೊಳ್ಳುವರು. ಹೀಗಾಗಿ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.</p>.<p>ನಂತರ, ಶೂನ್ಯ ವೇಳೆಯಲ್ಲಿ ಸಂಸದ ಕೆ.ಕೇಶವರಾವ್ ಅವರು ಪುನಃ ಈ ವಿಷಯ ಪ್ರಸ್ತಾಪಿಸಲು ಮುಂದಾದರು. ಶೂನ್ಯವೇಳೆಯಲ್ಲಿ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಸಭಾಪತಿ ಹೇಳಿದರು. ಆಗ ಟಿಆರ್ಎಸ್ ಸಂಸದರು ಕೇಶವರಾವ್ ನೇತೃತ್ವದಲ್ಲಿ ಸಭಾಪತಿ ಪೀಠದ ಮುಂದೆ ಪ್ರತಿಭಟನೆ ಆರಂಭಿಸಿದರು.</p>.<p>ನಂತರ, ಸಂಸದರು ಹಕ್ಕುಚ್ಯುತಿಗೆ ಸಂಬಂಧಿಸಿದ ನೋಟಿಸ್ಅನ್ನು ರಾಜ್ಯಸಭಾ ಕಾರ್ಯದರ್ಶಿಗೆ ಸಲ್ಲಿಸಿ, ಸಭಾತ್ಯಾಗ ಮಾಡಿದರು.</p>.<p>ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದ ಪ್ರಧಾನಿ ಮೋದಿ,‘ಆಂಧ್ರಪ್ರದೇಶವನ್ನು ವಿಭಜನೆ ಮಾಡಿದ ರೀತಿ ನಾಚಿಕೆ ತರುವಂತಿತ್ತು. ಧ್ವನಿವರ್ಧಕಗಳನ್ನು ಬಂದ್ ಮಾಡಲಾಗಿತ್ತು, ಕಾರದ ಪುಡಿಯನ್ನು ಎರಚಲಾಗಿತ್ತು. ಚರ್ಚೆಯೂ ನಡೆಯಲಿಲ್ಲ’ ಎಂದಿದ್ದರು.</p>.<p>‘ರಾಜ್ಯವನ್ನು ಈ ರೀತಿ ವಿಭಜಿಸಿದ್ದು ಸರಿಯಾದ ಕ್ರಮವೇ. ಅದು ಪ್ರಜಾಪ್ರಭುತ್ವವೇ’ ಎಂದೂ ಪ್ರಶ್ನಿಸಿದ್ದ ಅವರು, ಈ ವಿಷಯವಾಗಿ ಈಗಲೂ ಆಂಧ್ರಪ್ರದೇಶ ಹಾಗೂ ತೆಲಂಗಾಣ ಮಧ್ಯೆ ಸಂಘರ್ಷ ಇದೆ ಎಂದು ಛೇಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>