ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಪತಿಯಲ್ಲಿ ರಾಜ್ಯದ ಅತಿಥಿ ಗೃಹ ಪಾರದರ್ಶಕತೆಗೆ ಕ್ರಮ

Last Updated 16 ಮಾರ್ಚ್ 2021, 21:43 IST
ಅಕ್ಷರ ಗಾತ್ರ

ಹೈದರಾಬಾದ್‌: ಕರ್ನಾಟಕ ಸರ್ಕಾರವು ತಿರುಪತಿಯಲ್ಲಿ ₹ 200 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಅತಿಥಿ ಗೃಹಗಳ ಯೋಜನೆಯ ಗುತ್ತಿಗೆ ಪತ್ರಗಳನ್ನು ನ್ಯಾಯಾಂಗ ಪೂರ್ವ ವೀಕ್ಷಣಾ ಆಯೋಗದ ಅನುಮತಿಗಾಗಿ ಸಲ್ಲಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂನ (ಟಿಟಿಡಿ) ಅಧಿಕಾರಿಗಳು ತಿಳಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಟಿಟಿಡಿ ವೆಬ್‌ಸೈಟ್‌ ಮೂಲಕ ಸಾರ್ವಜನಿಕರಿಂದ ಬರುವ ಸಲಹೆಗಳು, ಆಕ್ಷೇಪಣೆಗಳನ್ನು ಅನುಮತಿ ನೀಡುವ ಮೊದಲು ಪರಿಶೀಲಿಸಲಾಗುತ್ತದೆ ಎಂದಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಗುದ್ದಲಿಪೂಜೆ ನೆರವೇರಿಸಿದ್ದರು. ರಾಜ್ಯ ಸರ್ಕಾರಈಗಾಗಲೇ ₹100 ಕೋಟಿ ವರ್ಗಾಯಿಸಿದೆ. https://judcialpreview.ap.gov.in ಮತ್ತು www.tirumala.org. ಇಲ್ಲಿ ಯೋಜನೆಯ ದಾಖಲೆಗಳು ಲಭ್ಯ ಇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT