ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಟಿಟಿಡಿ ವೆಬ್ಸೈಟ್ ಮೂಲಕ ಸಾರ್ವಜನಿಕರಿಂದ ಬರುವ ಸಲಹೆಗಳು, ಆಕ್ಷೇಪಣೆಗಳನ್ನು ಅನುಮತಿ ನೀಡುವ ಮೊದಲು ಪರಿಶೀಲಿಸಲಾಗುತ್ತದೆ ಎಂದಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ಕಳೆದ ಸೆಪ್ಟೆಂಬರ್ನಲ್ಲಿ ಗುದ್ದಲಿಪೂಜೆ ನೆರವೇರಿಸಿದ್ದರು. ರಾಜ್ಯ ಸರ್ಕಾರಈಗಾಗಲೇ ₹100 ಕೋಟಿ ವರ್ಗಾಯಿಸಿದೆ. https://judcialpreview.ap.gov.in ಮತ್ತು www.tirumala.org. ಇಲ್ಲಿ ಯೋಜನೆಯ ದಾಖಲೆಗಳು ಲಭ್ಯ ಇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.