‘ಹಿಂದೆ ದರ್ಶನಕ್ಕೆ ಬರುವ ಭಕ್ತರನ್ನು ಅವರ ಆಧಾರ್ ಕಾರ್ಡ್ ಪರಿಶೀಲಿಸಿ, ವೈಯಕ್ತಿಕ ವಿವರಗಳನ್ನು ನಮೂದಿಸಿಕೊಂಡು ಒಳಗೆ ಬಿಡಲಾಗುತ್ತಿತ್ತು. ಇದು ತ್ರಾಸದಾಯಕ ಕೆಲಸವಾಗಿತ್ತು. ಮುಖ ಗುರುತಿಸುವಿಕೆ ತಂತ್ರಜ್ಞಾನದಿಂದಾಗಿ ಭಕ್ತರ ತಪಾಸಣೆ ಕಾರ್ಯ ಸುಲಭವಾಗಲಿದೆ. ಲಡ್ಡು ಪ್ರಸಾದ ವಿತರಣೆ, ಕೊಠಡಿಗಳ ಹಂಚಿಕೆ ಸೇರಿದಂತೆ ಇತರೆ ಕಾರ್ಯಗಳಲ್ಲಿ ಪಾರದರ್ಶಕತೆ ತರಬಹುದು’ ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.