<p><strong>ನವದೆಹಲಿ:</strong> ‘ತುಕಡೆ ತುಕಡೆ ಗ್ಯಾಂಗ್‘ ಎಂದು ಕರೆಸಿಕೊಳ್ಳುವ ಕೆಲವು ಪ್ರತಿಭಟನಾಕಾರರು ದೆಹಲಿಯ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನೂ ಶಾಹೀನ್ಭಾಗ್ ರೀತಿಯ ಪ್ರತಿಭಟನೆಗಳನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೆಹಲಿ ಬಿಜೆಪಿ ಸಂಸದ ಮನೋಜ್ ತಿವಾರಿ ಆರೋಪಿಸಿದ್ದಾರೆ.</p>.<p>‘ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕೆಲವರು ಖಾಲಿಸ್ತಾನ ಪರವಾಗಿ ಘೋಷಣೆಗಳನ್ನು ಕೂಗುತ್ತಾ, ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯೋಚಿತ ಪಿತೂರಿ ನಡೆಸುತ್ತಿದ್ದಾರೆ‘ ಎಂದು ತಿವಾರಿ ಆರೋಪಿಸಿದ್ದಾರೆ.</p>.<p>‘ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ಬಾಗ್ನಲ್ಲಿ ಪ್ರತಿಭಟನೆ ನಡೆಸಿದ ಗುಂಪುಗಳು ಮತ್ತು ಕೆಲವು ವ್ಯಕ್ತಿಗಳು ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವ ನೆಪದಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದು ಶಾಹೀನ್ಬಾಗ್ ಮಾಡಲು ಹೊರಟಿದ್ದಾರೆ ‘ ಎಂದು ತಿವಾರಿ ದೂರಿದ್ದಾರೆ.</p>.<p>ದಕ್ಷಿಣ ದೆಹಲಿಯ ಶಾಹೀನ್ ಬಾಗ್ನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈ ವರ್ಷದ ಆರಂಭದಲ್ಲಿ ಸರಣಿ ಪ್ರತಿಭಟನೆ ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ತುಕಡೆ ತುಕಡೆ ಗ್ಯಾಂಗ್‘ ಎಂದು ಕರೆಸಿಕೊಳ್ಳುವ ಕೆಲವು ಪ್ರತಿಭಟನಾಕಾರರು ದೆಹಲಿಯ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನೂ ಶಾಹೀನ್ಭಾಗ್ ರೀತಿಯ ಪ್ರತಿಭಟನೆಗಳನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೆಹಲಿ ಬಿಜೆಪಿ ಸಂಸದ ಮನೋಜ್ ತಿವಾರಿ ಆರೋಪಿಸಿದ್ದಾರೆ.</p>.<p>‘ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕೆಲವರು ಖಾಲಿಸ್ತಾನ ಪರವಾಗಿ ಘೋಷಣೆಗಳನ್ನು ಕೂಗುತ್ತಾ, ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯೋಚಿತ ಪಿತೂರಿ ನಡೆಸುತ್ತಿದ್ದಾರೆ‘ ಎಂದು ತಿವಾರಿ ಆರೋಪಿಸಿದ್ದಾರೆ.</p>.<p>‘ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ಬಾಗ್ನಲ್ಲಿ ಪ್ರತಿಭಟನೆ ನಡೆಸಿದ ಗುಂಪುಗಳು ಮತ್ತು ಕೆಲವು ವ್ಯಕ್ತಿಗಳು ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವ ನೆಪದಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದು ಶಾಹೀನ್ಬಾಗ್ ಮಾಡಲು ಹೊರಟಿದ್ದಾರೆ ‘ ಎಂದು ತಿವಾರಿ ದೂರಿದ್ದಾರೆ.</p>.<p>ದಕ್ಷಿಣ ದೆಹಲಿಯ ಶಾಹೀನ್ ಬಾಗ್ನಲ್ಲಿ ಕೊರೊನಾ ಸಾಂಕ್ರಾಮಿಕದ ನಡುವೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈ ವರ್ಷದ ಆರಂಭದಲ್ಲಿ ಸರಣಿ ಪ್ರತಿಭಟನೆ ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>