ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ಕಾಗೆಗಳ ಸಾವು: ದೆಹಲಿಯಲ್ಲಿಯೂ ಹಕ್ಕಿ ಜ್ವರ ಭೀತಿ

Last Updated 8 ಜನವರಿ 2021, 11:40 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 20 ಕಾಗೆಗಳು ಮೃತಪಟ್ಟಿದ್ದು, ಹಕ್ಕಿ ಜ್ವರದ ಭೀತಿ ಎದುರಾಗಿದೆ.

ಮಯೂರ ವಿಹಾರ್ 3ನೇ ಹಂತದಲ್ಲಿ ಕಾಗೆಗಳು ಮೃತಪಟ್ಟಿವೆ. ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮಾದರಿ ಸಂಗ್ರಹಿಸಿದ್ದು, ಹೆಚ್ಚಿನ ಪರೀಕ್ಷೆಗಾಗಿ ಜಲಂಧರ್‌ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.

‘ಮಯೂರ ವಿಹಾರ್ ಪ್ರದೇಶದಲ್ಲಿ 20 ಕಾಗೆಗಳು ಮೃತಪಟ್ಟಿವೆ. ನಾವು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಸರಿಸುತ್ತಿದ್ದೇವೆ. ಕಾಗಗೆಳ ಸಾವಿಗೆ ಹಕ್ಕಿ ಜ್ವರ ಕಾರಣವೇ ಎಂಬುದು ಇನ್ನಷ್ಟೇ ದೃಢಪಡಬೇಕಿದೆ’ ಎಂದು ಇಲಾಖೆಯ ಅಧಿಕಾರಿ ಡಾ. ರಾಕೇಶ್ ಸಿಂಗ್ ಹೇಳಿದ್ದಾರೆ.

ದೇಶದ ಹಲವೆಡೆ ಹಕ್ಕಿ ಜ್ವರ ಕಂಡುಬಂದಿರುವ ಕಾರಣ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರವು ಈಗಾಗಲೇ ಸೂಚಿಸಿದೆ. ಕೇರಳ, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹಕ್ಕಿ ಜ್ವರ ಹರಡಿದೆ. ಹರಿಯಾಣದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ದೆಹಲಿಯಲ್ಲಿ ಈವರೆಗೆ ಹಕ್ಕಿ ಜ್ವರ ವರದಿಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ಹೇಳಿದ್ದರು. ನೆರೆ ರಾಜ್ಯಗಳಿಂದ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT