<p><strong>ನವದೆಹಲಿ:</strong> ಕಳೆದ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 20 ಕಾಗೆಗಳು ಮೃತಪಟ್ಟಿದ್ದು, ಹಕ್ಕಿ ಜ್ವರದ ಭೀತಿ ಎದುರಾಗಿದೆ.</p>.<p>ಮಯೂರ ವಿಹಾರ್ 3ನೇ ಹಂತದಲ್ಲಿ ಕಾಗೆಗಳು ಮೃತಪಟ್ಟಿವೆ. ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮಾದರಿ ಸಂಗ್ರಹಿಸಿದ್ದು, ಹೆಚ್ಚಿನ ಪರೀಕ್ಷೆಗಾಗಿ ಜಲಂಧರ್ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/what-is-bird-flu-and-symptoms-how-severe-is-the-latest-outbreak-in-india-centre-issues-advisory-794111.html" target="_blank">ಆಳ–ಅಗಲ | ಹಕ್ಕಿಜ್ವರ: ಭೀತಿ ಬೇಡ, ಎಚ್ಚರ ಇರಲಿ</a></p>.<p>‘ಮಯೂರ ವಿಹಾರ್ ಪ್ರದೇಶದಲ್ಲಿ 20 ಕಾಗೆಗಳು ಮೃತಪಟ್ಟಿವೆ. ನಾವು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಸರಿಸುತ್ತಿದ್ದೇವೆ. ಕಾಗಗೆಳ ಸಾವಿಗೆ ಹಕ್ಕಿ ಜ್ವರ ಕಾರಣವೇ ಎಂಬುದು ಇನ್ನಷ್ಟೇ ದೃಢಪಡಬೇಕಿದೆ’ ಎಂದು ಇಲಾಖೆಯ ಅಧಿಕಾರಿ ಡಾ. ರಾಕೇಶ್ ಸಿಂಗ್ ಹೇಳಿದ್ದಾರೆ.</p>.<p>ದೇಶದ ಹಲವೆಡೆ ಹಕ್ಕಿ ಜ್ವರ ಕಂಡುಬಂದಿರುವ ಕಾರಣ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರವು ಈಗಾಗಲೇ ಸೂಚಿಸಿದೆ. ಕೇರಳ, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹಕ್ಕಿ ಜ್ವರ ಹರಡಿದೆ. ಹರಿಯಾಣದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cook-eggs-and-meat-fully-central-minister-advice-to-people-on-fears-over-bird-flu-spread-to-humans-793926.html" target="_blank">ಹಕ್ಕಿ ಜ್ವರದ ಭೀತಿ: ‘ಮಾಂಸ, ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನಿ’</a></p>.<p>ದೆಹಲಿಯಲ್ಲಿ ಈವರೆಗೆ ಹಕ್ಕಿ ಜ್ವರ ವರದಿಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ಹೇಳಿದ್ದರು. ನೆರೆ ರಾಜ್ಯಗಳಿಂದ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳೆದ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 20 ಕಾಗೆಗಳು ಮೃತಪಟ್ಟಿದ್ದು, ಹಕ್ಕಿ ಜ್ವರದ ಭೀತಿ ಎದುರಾಗಿದೆ.</p>.<p>ಮಯೂರ ವಿಹಾರ್ 3ನೇ ಹಂತದಲ್ಲಿ ಕಾಗೆಗಳು ಮೃತಪಟ್ಟಿವೆ. ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮಾದರಿ ಸಂಗ್ರಹಿಸಿದ್ದು, ಹೆಚ್ಚಿನ ಪರೀಕ್ಷೆಗಾಗಿ ಜಲಂಧರ್ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/what-is-bird-flu-and-symptoms-how-severe-is-the-latest-outbreak-in-india-centre-issues-advisory-794111.html" target="_blank">ಆಳ–ಅಗಲ | ಹಕ್ಕಿಜ್ವರ: ಭೀತಿ ಬೇಡ, ಎಚ್ಚರ ಇರಲಿ</a></p>.<p>‘ಮಯೂರ ವಿಹಾರ್ ಪ್ರದೇಶದಲ್ಲಿ 20 ಕಾಗೆಗಳು ಮೃತಪಟ್ಟಿವೆ. ನಾವು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಸರಿಸುತ್ತಿದ್ದೇವೆ. ಕಾಗಗೆಳ ಸಾವಿಗೆ ಹಕ್ಕಿ ಜ್ವರ ಕಾರಣವೇ ಎಂಬುದು ಇನ್ನಷ್ಟೇ ದೃಢಪಡಬೇಕಿದೆ’ ಎಂದು ಇಲಾಖೆಯ ಅಧಿಕಾರಿ ಡಾ. ರಾಕೇಶ್ ಸಿಂಗ್ ಹೇಳಿದ್ದಾರೆ.</p>.<p>ದೇಶದ ಹಲವೆಡೆ ಹಕ್ಕಿ ಜ್ವರ ಕಂಡುಬಂದಿರುವ ಕಾರಣ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರವು ಈಗಾಗಲೇ ಸೂಚಿಸಿದೆ. ಕೇರಳ, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹಕ್ಕಿ ಜ್ವರ ಹರಡಿದೆ. ಹರಿಯಾಣದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cook-eggs-and-meat-fully-central-minister-advice-to-people-on-fears-over-bird-flu-spread-to-humans-793926.html" target="_blank">ಹಕ್ಕಿ ಜ್ವರದ ಭೀತಿ: ‘ಮಾಂಸ, ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನಿ’</a></p>.<p>ದೆಹಲಿಯಲ್ಲಿ ಈವರೆಗೆ ಹಕ್ಕಿ ಜ್ವರ ವರದಿಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ಹೇಳಿದ್ದರು. ನೆರೆ ರಾಜ್ಯಗಳಿಂದ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>