<p><strong>ನವದೆಹಲಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಅಮಾನತು ಮಾಡಿದ ಒಂದು ವಾರದ ಬಳಿಕ ಮರುಸ್ಥಾಪನೆ ಮಾಡಲಾಗಿದೆ.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ, 'ಸತ್ಯಮೇವ ಜಯತೇ' ಎಂದಷ್ಟೇ ಬರೆದುಕೊಂಡಿದೆ.</p>.<p>ಕಳೆದ ವಾರ ದೆಹಲಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದೊಂದಿಗಿನ ಫೋಟೊವನ್ನು ರಾಹುಲ್ ಗಾಂಧಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿತ್ತು.</p>.<p>ಇದಕ್ಕೆ ವಿರೋಧ ಪಕ್ಷದ ಸದಸ್ಯರಿಂದ ಭಾರಿ ಆಕ್ಷೇಪವೂ ವ್ಯಕ್ತವಾಗಿತ್ತು. ಟ್ವಿಟರ್ ಪಕ್ಷಪಾತಿಯಾಗಿದೆ ಎಂದೂ ಕಾಂಗ್ರೆಸ್ ನಾಯಕರು ದೂರಿದ್ದರು. ರಾಜಕಾರಣದಲ್ಲಿ ಟ್ವಿಟರ್ ಹಸ್ತಕ್ಷೇಪ ಮಾಡುತ್ತಿದೆ ಎಂದು ರಾಹುಲ್ ಹರಿಹಾಯ್ದಿದ್ದರು.</p>.<p>ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಲವು ಪ್ರಮುಖ ನಾಯಕರ ಟ್ವಿಟರ್ ಖಾತೆಗಳನ್ನೂ ಅಮಾನತು ಮಾಡಲಾಗಿತ್ತು. ಇದು ಭಾರತದಲ್ಲಿ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು.</p>.<p>'ಅಮಾನತುಗೊಂಡಿದ್ದ ಕಾಂಗ್ರೆಸ್ ನಾಯಕರ ಎಲ್ಲಾ ಖಾತೆಗಳನ್ನು ಮರುಸ್ಥಾಪನೆ ಮಾಡಲಾಗಿದೆ. ಇದಕ್ಕೆ ಟ್ವಿಟರ್ ಯಾವುದೇ ಕಾರಣವನ್ನು ನೀಡಿಲ್ಲ' ಎಂದು ಸಾಮಾಜಿಕ ಮಾಧ್ಯಮ ಖಾತೆಗಳ ಕಾಂಗ್ರೆಸ್ ಉಸ್ತುವಾರಿ ರೋಹನ್ ಗುಪ್ತಾ ಎನ್ಡಿಟಿವಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಅಮಾನತು ಮಾಡಿದ ಒಂದು ವಾರದ ಬಳಿಕ ಮರುಸ್ಥಾಪನೆ ಮಾಡಲಾಗಿದೆ.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ, 'ಸತ್ಯಮೇವ ಜಯತೇ' ಎಂದಷ್ಟೇ ಬರೆದುಕೊಂಡಿದೆ.</p>.<p>ಕಳೆದ ವಾರ ದೆಹಲಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದೊಂದಿಗಿನ ಫೋಟೊವನ್ನು ರಾಹುಲ್ ಗಾಂಧಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿತ್ತು.</p>.<p>ಇದಕ್ಕೆ ವಿರೋಧ ಪಕ್ಷದ ಸದಸ್ಯರಿಂದ ಭಾರಿ ಆಕ್ಷೇಪವೂ ವ್ಯಕ್ತವಾಗಿತ್ತು. ಟ್ವಿಟರ್ ಪಕ್ಷಪಾತಿಯಾಗಿದೆ ಎಂದೂ ಕಾಂಗ್ರೆಸ್ ನಾಯಕರು ದೂರಿದ್ದರು. ರಾಜಕಾರಣದಲ್ಲಿ ಟ್ವಿಟರ್ ಹಸ್ತಕ್ಷೇಪ ಮಾಡುತ್ತಿದೆ ಎಂದು ರಾಹುಲ್ ಹರಿಹಾಯ್ದಿದ್ದರು.</p>.<p>ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಲವು ಪ್ರಮುಖ ನಾಯಕರ ಟ್ವಿಟರ್ ಖಾತೆಗಳನ್ನೂ ಅಮಾನತು ಮಾಡಲಾಗಿತ್ತು. ಇದು ಭಾರತದಲ್ಲಿ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು.</p>.<p>'ಅಮಾನತುಗೊಂಡಿದ್ದ ಕಾಂಗ್ರೆಸ್ ನಾಯಕರ ಎಲ್ಲಾ ಖಾತೆಗಳನ್ನು ಮರುಸ್ಥಾಪನೆ ಮಾಡಲಾಗಿದೆ. ಇದಕ್ಕೆ ಟ್ವಿಟರ್ ಯಾವುದೇ ಕಾರಣವನ್ನು ನೀಡಿಲ್ಲ' ಎಂದು ಸಾಮಾಜಿಕ ಮಾಧ್ಯಮ ಖಾತೆಗಳ ಕಾಂಗ್ರೆಸ್ ಉಸ್ತುವಾರಿ ರೋಹನ್ ಗುಪ್ತಾ ಎನ್ಡಿಟಿವಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>