ಎನ್ಐಎಂನಲ್ಲಿ ತರಬೇತಿ ಪಡೆಯುತ್ತಿದ್ದ ತಂಡವು ಅಕ್ಟೋಬರ್ 4ರ ಮಂಗಳವಾರ ಬೆಳಿಗ್ಗೆ 8.45ರ ಸುಮಾರಿಗೆ ಪರ್ವತಾರೋಹಣ ಅಭ್ಯಾಸ ನಡೆಸಿ ಹಿಂತಿರುಗುತ್ತಿದ್ದಾಗ ಹಠಾತ್ತನೆ ಹಿಮಪಾತ ಉಂಟಾಗಿತ್ತು. ಹಿಮದಡಿ ಸಿಲುಕಿದ್ದ ನಾಲ್ವರ ಶವಗಳನ್ನು ಘಟನೆ ನಡೆದ ದಿನವೇ ಹೊರತೆಗೆಯಲಾಗಿತ್ತು. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್ಇಒಸಿ), ಜಮ್ಮು ಮತ್ತು ಕಾಶ್ಮೀರದ ಹೈ ಆಲ್ಟಿಟ್ಯೂಡ್ ವಾರ್ಫೇರ್ ಸ್ಕೂಲ್ನ 14 ಮಂದಿಯನ್ನೊಳಗೊಂಡ ತಂಡ, ಎಸ್ಡಿಆರ್ಎಫ್ ಮತ್ತು ಇಂಡೊ ಟಿಬೇಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ತಂಡಗಳು ಘಟನಾ ಸ್ಥಳದಲ್ಲಿ ನಿರಂತರವಾಗಿ ಶೋಧ ಕಾರ್ಯ ಕೈಗೊಂಡಿವೆ.