ಭಾನುವಾರ, ಏಪ್ರಿಲ್ 2, 2023
33 °C

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಪುರಿ: ಇಲ್ಲಿನ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಭಾನುವಾರ ಕಾಲ್ತುಳಿತ ಸಂಭವಿಸಿ 2 ಭಕ್ತರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. 

ಸಂಕ್ರಾಂತಿ ಪ್ರಯುಕ್ತ ಇಲ್ಲಿ ನಡೆಯುವ ’ಮಕರ ಮೇಳ’ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಈ ವೇಳೆ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಮಕರ ಸಂಕ್ರಾಂತಿ ಹಬ್ಬದ  ಹಿಂದಿನ ರಾತ್ರಿ ಹಲವಾರು ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು ಆದ ಕಾರಣ ಬೆಳಿಗ್ಗೆ ದೇವಾಸ್ಥಾನದ ಬಾಗಿಲು ತೆರೆಯುವುದು ತಡವಾಗಿದೆ.

ಈ ಸಂದರ್ಭದಲ್ಲಿ ಸಿಂಹದ್ವಾರದ ಬಳಿ ಸಾಕಷ್ಟು ಜನರು ಜಮಾಯಿಸಿದ್ದರು, ಈ ವೇಳೆ ಕಾಲ್ತುಳಿತ ಏರ್ಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಸಮರ್ಥ್ ವರ್ಮಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು