ಜಮ್ಮು ಮತ್ತು ಕಾಶ್ಮೀರದಲ್ಲಿ ಎಐಸಿಸಿ ಉಸ್ತುವಾರಿಯಾಗಿರುವ ರಜನಿ ಪಾಟೀಲ್ ಮತ್ತು ಜಮ್ಮು–ಕಾಶ್ಮೀರದ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಿಜಾಮುದ್ದೀನ್ ಖತಾನಾ ಹಾಗೂ ಅವರ ಪುತ್ರ ಗುಲ್ಜರ್ ಅಹ್ಮದ್ ಖತಾನಾ ಅವರು ತಮ್ಮ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು. ಈ ತಿಂಗಳ ಆರಂಭದಲ್ಲಿ ಡಿಎಪಿ ತೊರೆದು ಬಂದಿದ್ದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವ ಪೀರ್ಜಾದ ಮೊಹಮ್ಮದ್ ಸಯೀದ್, ಮಾಜಿ ಶಾಸಕ ಬಲ್ವಾನ್ ಸಿಂಗ್ ಅವರು ಉಪಸ್ಥಿತರಿದ್ದರು.