ರಾಜಸ್ಥಾನದ ಅಜ್ಮೀರ್ನಲ್ಲಿ ಲಂಚ ಸ್ವೀಕರಿಸಿದ ಇಬ್ಬರ ಬಂಧನ

ಜೈಪುರ: 2 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಇಬ್ಬರನ್ನು ರಾಜಸ್ಥಾನದ ಅಜ್ಮೀರ್ನಲ್ಲಿ ಎಸಿಬಿ ಬುಧವಾರ ಬಂಧಿಸಿದೆ.
ಅಜ್ಮೀರ್ ಮಹಾನಗರ ಪಾಲಿಕೆಯ ಆಡಳಿತ ಮಂಡಳಿಯ ಸದಸ್ಯೆಯ ಪತಿ ಲಂಚ ಸ್ವೀಕರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾರ್ಡ್ ನಂ. 41ರ ಕೌನ್ಸಿಲರ್ ಅವರ ಪತಿ ರಂಜನ್ ಶರ್ಮಾ ಎಂಬುವವರು ಮಧ್ಯವರ್ತಿ ಕಿಶನ್ ಕಂಡೇಲ್ವಾಲ್ ಮತ್ತು ದೇವೇಂದ್ರ ಸಿಂಗ್ ಮೂಲಕ ಕಟ್ಟಡ ನಿರ್ಮಾಣ ಕಾರ್ಯವೊಂದಕ್ಕೆ ಅನುಮತಿ ದೊರಕಿಸಿಕೊಡಲು 50 ಲಕ್ಷ ರೂ. ಲಂಚ ಕೇಳಿದ್ದರು ಎಂಬ ದೂರು ಸ್ವೀಕರಿಸಿದ್ದಾಗಿ ಎಸಿಬಿ ತಿಳಿಸಿದೆ.
ದೂರಿಗೆ ಸಂಬಂಧಿಸಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಕಿಶನ್ ಕಂಡೇಲ್ವಾಲ್ ಮತ್ತು ದೇವೇಂದ್ರ ಸಿಂಗ್ ಅವರನ್ನು 2 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ್ದಕ್ಕಾಗಿ ಬಂಧಿಸಿದ್ದಾರೆ.
ಮೋದಿ ಸಂಪುಟಕ್ಕೆ ರಾಜ್ಯದಿಂದ ನಾಲ್ವರು, ಇಲ್ಲಿದೆ ಎಲ್ಲ ನೂತನ ಸಚಿವರ ಪಟ್ಟಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.