<p><strong>ನವದೆಹಲಿ: </strong>ಇಲ್ಲಿನ ವಿಶ್ವಾಸ ನಗರ ಕ್ಷೇತ್ರದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಅವರ ಕಚೇರಿಗೆ ಬೀಗ ಒಡೆದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಫೆ. 10ರಂದು ಕರ್ಕರ್ದೂಮಾ ಕೋರ್ಟ್ ಟ್ರಾಫಿಕ್ ಸಿಗ್ನಲ್ ಬಳಿಯ ಶರ್ಮಾ ಅವರ ಕಚೇರಿಯಲ್ಲಿ ಕಳ್ಳತನ ಆಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಫೆ.9 ರಂದು ನಿರಂಜನ್ ಅವರು ಮಧ್ಯಾಹ್ನ 3 ಗಂಟೆಗೆ ಕಚೇರಿ ಬಾಗಿಲು ಹಾಕಿಕೊಂಡು ಹೋಗಿದ್ದರು. ಮರುದಿನ ಬೆಳಿಗ್ಗೆ ಕಚೇರಿ ಬಾಗಿಲು ತೆರೆದು ನೋಡಿದಾಗ, ಕಿಟಕಿ ಬಾಗಿಲು ಒಡೆದಿರುವುದು ಹಾಗೂ ಕೆಲ ವಸ್ತುಗಳು ಕಳ್ಳತನವಾಗಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಚೇರಿ ಸುತ್ತಮುತ್ತಲ ಪ್ರದೇಶದ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ವೇಳೆ ಇಬ್ಬರು ವ್ಯಕ್ತಿಗಳು ಓಡಾಡುವುದು ಕಂಡು ಬಂದಿದೆ. ಆರೋಪಿಗಳನ್ನು ಬಂಧಿಸಿ ಎರಡು ಟಿ.ವಿ, ಐದು ನೀರಿನ ನಲ್ಲಿಗಳು, ನೀರಿನ ಮೋಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ರೋಹಿತ್ ಮೀನಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಇಲ್ಲಿನ ವಿಶ್ವಾಸ ನಗರ ಕ್ಷೇತ್ರದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಅವರ ಕಚೇರಿಗೆ ಬೀಗ ಒಡೆದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಫೆ. 10ರಂದು ಕರ್ಕರ್ದೂಮಾ ಕೋರ್ಟ್ ಟ್ರಾಫಿಕ್ ಸಿಗ್ನಲ್ ಬಳಿಯ ಶರ್ಮಾ ಅವರ ಕಚೇರಿಯಲ್ಲಿ ಕಳ್ಳತನ ಆಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಫೆ.9 ರಂದು ನಿರಂಜನ್ ಅವರು ಮಧ್ಯಾಹ್ನ 3 ಗಂಟೆಗೆ ಕಚೇರಿ ಬಾಗಿಲು ಹಾಕಿಕೊಂಡು ಹೋಗಿದ್ದರು. ಮರುದಿನ ಬೆಳಿಗ್ಗೆ ಕಚೇರಿ ಬಾಗಿಲು ತೆರೆದು ನೋಡಿದಾಗ, ಕಿಟಕಿ ಬಾಗಿಲು ಒಡೆದಿರುವುದು ಹಾಗೂ ಕೆಲ ವಸ್ತುಗಳು ಕಳ್ಳತನವಾಗಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಚೇರಿ ಸುತ್ತಮುತ್ತಲ ಪ್ರದೇಶದ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ವೇಳೆ ಇಬ್ಬರು ವ್ಯಕ್ತಿಗಳು ಓಡಾಡುವುದು ಕಂಡು ಬಂದಿದೆ. ಆರೋಪಿಗಳನ್ನು ಬಂಧಿಸಿ ಎರಡು ಟಿ.ವಿ, ಐದು ನೀರಿನ ನಲ್ಲಿಗಳು, ನೀರಿನ ಮೋಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ರೋಹಿತ್ ಮೀನಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>