<p><strong>ನವದೆಹಲಿ:</strong> ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಹಾಗೂ ಹರಿಯಾಣ ಗಡಿ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.</p>.<p>ಈ ಮಧ್ಯೆ ಸಿಂಘು ಗಡಿ ಪ್ರದೇಶದಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಗೊಂಡಿದೆ. ಇದರಿಂದ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿರಬಹುದೇ ಎಂಬುದು ಆತಂಕ ಸೃಷ್ಟಿಯಾಗಿದೆ.</p>.<p>ದೆಹಲಿ ಪೊಲೀಸ್ ನೀಡಿರುವ ಮಾಹಿತಿ ಪ್ರಕಾರ, ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇವರನ್ನು ಹೋಮ್ ಕ್ವಾರಂಟೈನ್ಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/pm-modi-urges-farmers-to-hear-narendra-tomar-piyush-goyal-out-on-farm-laws-786205.html" itemprop="url">ರೈತರು ನರೇಂದ್ರ ತೋಮರ್, ಪೀಯೂಷ್ ಗೋಯಲ್ ಮಾತುಗಳನ್ನು ಕೇಳಿ: ಪ್ರಧಾನಿ ಮೋದಿ ಮನವಿ </a></p>.<p>ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 16ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ, ದೇಶದಾದ್ಯಂತ ರೈಲು ಸಂಚಾರಕ್ಕೆ ಅಡ್ಡಿ ಮಾಡುವುದಾಗಿ ಘೋಷಿಸಿದ್ದಾರೆ.</p>.<p>ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ರೈತ ಮುಖಂಡರು ಯೋಜನೆಯಿರಿಸಿದ್ದಾರೆ. ದೆಹಲಿ, ಹರಿಯಾಣಕ್ಕಷ್ಟೇ ಸೀಮಿತಗೊಳ್ಳದೆ ದೇಶವ್ಯಾಪಿ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/farmers-protest-enters-16th-day-only-god-knows-solution-says-farmer-leader-786190.html" itemprop="url">ಪ್ರತಿಭಟನೆ 16ನೇ ದಿನಕ್ಕೆ: ಪರಿಹಾರ ದೇವರಿಗೆ ಗೊತ್ತು –ರೈತ ಮುಖಂಡ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಹಾಗೂ ಹರಿಯಾಣ ಗಡಿ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.</p>.<p>ಈ ಮಧ್ಯೆ ಸಿಂಘು ಗಡಿ ಪ್ರದೇಶದಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಗೊಂಡಿದೆ. ಇದರಿಂದ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿರಬಹುದೇ ಎಂಬುದು ಆತಂಕ ಸೃಷ್ಟಿಯಾಗಿದೆ.</p>.<p>ದೆಹಲಿ ಪೊಲೀಸ್ ನೀಡಿರುವ ಮಾಹಿತಿ ಪ್ರಕಾರ, ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇವರನ್ನು ಹೋಮ್ ಕ್ವಾರಂಟೈನ್ಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/pm-modi-urges-farmers-to-hear-narendra-tomar-piyush-goyal-out-on-farm-laws-786205.html" itemprop="url">ರೈತರು ನರೇಂದ್ರ ತೋಮರ್, ಪೀಯೂಷ್ ಗೋಯಲ್ ಮಾತುಗಳನ್ನು ಕೇಳಿ: ಪ್ರಧಾನಿ ಮೋದಿ ಮನವಿ </a></p>.<p>ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 16ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ, ದೇಶದಾದ್ಯಂತ ರೈಲು ಸಂಚಾರಕ್ಕೆ ಅಡ್ಡಿ ಮಾಡುವುದಾಗಿ ಘೋಷಿಸಿದ್ದಾರೆ.</p>.<p>ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ರೈತ ಮುಖಂಡರು ಯೋಜನೆಯಿರಿಸಿದ್ದಾರೆ. ದೆಹಲಿ, ಹರಿಯಾಣಕ್ಕಷ್ಟೇ ಸೀಮಿತಗೊಳ್ಳದೆ ದೇಶವ್ಯಾಪಿ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/farmers-protest-enters-16th-day-only-god-knows-solution-says-farmer-leader-786190.html" itemprop="url">ಪ್ರತಿಭಟನೆ 16ನೇ ದಿನಕ್ಕೆ: ಪರಿಹಾರ ದೇವರಿಗೆ ಗೊತ್ತು –ರೈತ ಮುಖಂಡ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>