<p><strong>ಸಿತಾರ್ಗಂಜ್(ಉತ್ತರಾಖಂಡ): </strong>ಶಾಲಾ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿ ಇಬ್ಬರು ಮೃತಪಟ್ಟು 30 ಮಂದಿ ಗಾಯಗೊಂಡರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.</p>.<p>ಶಾಲಾ ಮಕ್ಕಳು ಮತ್ತು ಸಿಬ್ಬಂದಿಯನ್ನು ಪಿಕ್ನಿಕ್ನಿಂದ ವಾಪಸ್ ಕರೆತರುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 74ರ ಸಿಸೈಯಾನ್ ಬಳಿ ಸೋಮವಾರ ಸಂಜೆ ಈ ಅಪಘಾತ ಸಂಭವಿಸಿದೆ ಎಂದು ಸಿತಾರ್ಗಂಜ್ನ ಉಪವಿಭಾಗಾಧಿಕಾರಿ ತುಷಾರ್ ಸೈನಿ ಹೇಳಿದ್ದಾರೆ.</p>.<p>14 ವರ್ಷದ ವಿದ್ಯಾರ್ಥಿನಿ ಮತ್ತು 35 ವರ್ಷದ ಶಿಕ್ಷಕರು ಅಪಘಾತದಲ್ಲಿ ಅಸುನೀಗಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಗಾಯಗೊಂಡಿರುವ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 22 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉನ್ನತ ಆಸ್ಪತ್ರೆಗಳಿಗೆ ಕಳುಹಿಸಲು ಸೂಚಿಸಲಾಗಿದೆ ಎಂದು ಸೈನಿ ಹೇಳಿದ್ದಾರೆ. ಅಪಘಾತದ ಸಂದರ್ಭ ಬಸ್ನಲ್ಲಿ 51 ಮಂದಿ ಇದ್ದರು.</p>.<p>ಘಟನೆ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿತಾರ್ಗಂಜ್(ಉತ್ತರಾಖಂಡ): </strong>ಶಾಲಾ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿ ಇಬ್ಬರು ಮೃತಪಟ್ಟು 30 ಮಂದಿ ಗಾಯಗೊಂಡರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.</p>.<p>ಶಾಲಾ ಮಕ್ಕಳು ಮತ್ತು ಸಿಬ್ಬಂದಿಯನ್ನು ಪಿಕ್ನಿಕ್ನಿಂದ ವಾಪಸ್ ಕರೆತರುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 74ರ ಸಿಸೈಯಾನ್ ಬಳಿ ಸೋಮವಾರ ಸಂಜೆ ಈ ಅಪಘಾತ ಸಂಭವಿಸಿದೆ ಎಂದು ಸಿತಾರ್ಗಂಜ್ನ ಉಪವಿಭಾಗಾಧಿಕಾರಿ ತುಷಾರ್ ಸೈನಿ ಹೇಳಿದ್ದಾರೆ.</p>.<p>14 ವರ್ಷದ ವಿದ್ಯಾರ್ಥಿನಿ ಮತ್ತು 35 ವರ್ಷದ ಶಿಕ್ಷಕರು ಅಪಘಾತದಲ್ಲಿ ಅಸುನೀಗಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಗಾಯಗೊಂಡಿರುವ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 22 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉನ್ನತ ಆಸ್ಪತ್ರೆಗಳಿಗೆ ಕಳುಹಿಸಲು ಸೂಚಿಸಲಾಗಿದೆ ಎಂದು ಸೈನಿ ಹೇಳಿದ್ದಾರೆ. ಅಪಘಾತದ ಸಂದರ್ಭ ಬಸ್ನಲ್ಲಿ 51 ಮಂದಿ ಇದ್ದರು.</p>.<p>ಘಟನೆ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>