ಜಲ್ಲಿಕಟ್ಟು: ತಮಿಳುನಾಡಿನಲ್ಲಿ ಇಬ್ಬರ ಸಾವು

ಮದುರೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯ ವೇಳೆ ನಡೆದ ಪ್ರತ್ಯೇಕ ದುರ್ಘಟನೆಗಳಲ್ಲಿ ಹೋರಿ ಪಳಗಿಸುವ ವ್ಯಕ್ತಿ ಸೇರಿದಂತೆ ಇಬ್ಬರು ಸೋಮವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಲಮೇಡುವಿನ ಹೋರಿ ಪಳಗಿಸುವ ವ್ಯಕ್ತಿ ಅರವಿಂದರಾಜ್ (26) ಮತ್ತು ಪುದುಕೋಟೈ ಜಿಲ್ಲೆಯಲ್ಲಿ ಪ್ರೇಕ್ಷಕ ಎಂ. ಅರವಿಂದ್ (25) ಎಂಬುವವರು ಹೋರಿ ತಿವಿದ ಪರಿಣಾಮ ಮೃತಪಟ್ಟಿದ್ದಾರೆ ಎಂದು ವಿವರಿಸಿದ್ದಾರೆ.
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಮೃತರ ಕುಟುಂಬಗಳಿಗೆ ತಲಾ ₹3ಲಕ್ಷ ಪರಿಹಾರ ಘೋಷಿಸಿದ್ದಾರೆ.
ಅವನಿಯಪುರಂನಲ್ಲಿ ನಡೆದ ಜಲ್ಲಿಕಟ್ಟು ವೇಳೆ ಹೋರಿ ಪಳಗಿಸುವವರು, ಮಾಲೀಕರು ಸೇರಿದಂತೆ 75 ಮಂದಿ ಹಾಗೂ ಪಲಮೇಡುವಿನಲ್ಲಿ 34 ಮಂದಿ ಗಾಯಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.