ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಲಷ್ಕರ್ ಎ ತಯಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರುಮಂಗಳವಾರ ಭದ್ರತಾಪಡೆ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಕುಲ್ಗಾಂನ ತಂಗದೂನಾ ಗ್ರಾಮದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಯು ಮಂಗಳವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆಯನ್ನು ನಡೆಸಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ವೇಳೆ ಕುಟುಂಬದವರ ಮನವಿ ಮೇರೆಗೆ ಉಗ್ರರು ಭದ್ರತಾ ಪಡೆ ಮುಂದೆ ಶರಣಾಗಿದ್ದಾರೆ. ತಮ್ಮ ಬಳಿಯಿದ್ದ ಎರಡು ಗ್ರೆನೇಡ್ ಮತ್ತು ಎರಡು ಪಿಸ್ತೂಲ್ಗಳನ್ನು ಭದ್ರತಾ ಸಿಬ್ಬಂದಿಯ ವಶಕ್ಕೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಈ ಇಬ್ಬರು ಉಗ್ರರನ್ನು ಯವರ್ ವಾಗೆ ಮತ್ತು ಅಮೀರ್ ಮಿರ್ ಎಂದು ಗುರುತಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.