ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: ಭಯೋತ್ಪಾದಕರಿಗೆ ಹಣಕಾಸಿನ ನೆರವು; ಇಬ್ಬರ ಬಂಧನ

Last Updated 10 ಆಗಸ್ಟ್ 2021, 10:43 IST
ಅಕ್ಷರ ಗಾತ್ರ

ಜಮ್ಮು: ‘ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡಿದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.

‘ಭದ್ರತಾ ಸಿಬ್ಬಂದಿಯು ನಿಖರ ಮಾಹಿತಿ ಮೇರೆಗೆ ಕಂಗಾ ಭ್ರೋತಿ ಗ್ರಾಮದ ಹಲವೆಡೆ ಶೋಧ ನಡೆಸಿದೆ. ಈ ವೇಳೆ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ ₹25.81 ಲಕ್ಷ ವಶಕ್ಕೆ ಪಡೆಯಲಾಗಿದೆ. ಇದು ಭಯೋತ್ಪಾದಕರಿಗೆ ನೀಡಲು ಸಂಗ್ರಹಿಸಿದ ಹಣ’ ಎಂದು ಅವರು ಹೇಳಿದರು.

‘ಬಂಧಿತರನ್ನು ಮೊಹಮ್ಮದ್‌ ಶಕೀಲ್‌ ಮತ್ತು ಮೊಹಮ್ಮದ್‌ ಅಲ್ಯಾಸ್‌ ಎಂದು ಗುರುತಿಸಲಾಗಿದೆ. ಈ ಸಂಬಂಧ ಮೆಂದಾರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈಗಾಗಲೇ ತನಿಖೆಯನ್ನು ಪ್ರಾರಂಭಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT