ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಲಖಿಂಪುರ ಖೇರಿಯಲ್ಲಿ ಕಳೆದ ವರ್ಷ ಅಕ್ಟೋಬರ್ 3ರಂದು ರೈತರು ಪ್ರತಿಭಟನೆ ನಡೆಸುತ್ತಿದ್ದರು.ಈ ವೇಳೆ ರೈತರ ಮೇಲೆ ಕಾರು ಚಲಾಯಿಸಿದ್ದರಿಂದ ನಾಲ್ವರುಮೃತಪಟ್ಟಿದ್ದರು. ಇದರಿಂದ ಉದ್ರಿಕ್ತರಾದ ಜನರ ಗುಂಪು ಬಿಜೆಪಿ ಕಾರ್ಯಕರ್ತರಾದ ಶುಭಂ ಬಾಜ್ಪೈ, ಶ್ಯಾಮ್ ಸುಂದರ್ ನಿಶಾದ್ಮತ್ತು ಕಾರು ಚಾಲಕ ಹರಿರಾಮ್ ಎನ್ನುವವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು.