<p><strong>ಮುಂಬೈ: </strong>ಮುಂದಿನ ಹದಿನೈದು ದಿನಗಳಲ್ಲಿ ಮಹಾರಾಷ್ಟ್ರದ ಇನ್ನೂ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಗುರುವಾರ ಹೇಳಿದ್ದಾರೆ.</p>.<p>‘ನಾನು ಮುಂಬೈ ಪೊಲೀಸ್ ಇಲಾಖೆಯಲ್ಲೇ ಮುಂದುವರಿಯಲು ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ₹2 ಕೋಟಿ ಕೇಳಿದ್ದರು. ಮತ್ತೊಬ್ಬ ಸಚಿವ ಅನಿಲ್ ಪರಬ್ ಅವರು ಗುತ್ತಿಗೆದಾರರಿಂದ ಹಣ ಸಂಗ್ರಹಿಸಿ ತರುವಂತೆ ಹೇಳಿದ್ದರು‘ ಎಂಬುದಾಗಿ ಸಚಿನ್ ವಾಜೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ವಿವರಿಸಲಾಗಿದೆ. ಈ ಪತ್ರ ಬಹಿರಂಗಗೊಂಡ ಬೆನ್ನಲ್ಲೇ, ಚಂದ್ರಕಾಂತ್ ಪಾಟೀಲ್ ಅವರಿಂದ ಇಂಥ ಹೇಳಿಕೆ ಹೊರಬಿದ್ದಿದೆ.</p>.<p>ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್, ‘ಇನ್ನು 15 ದಿನಗಳಲ್ಲಿ ಇಬ್ಬರು ರಾಜ್ಯ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಕೆಲವರು ಈ ಸಚಿವರ ವಿರುದ್ಧ ನ್ಯಾಯಾಲಯದ ಮೆಟ್ಟಲು ಏರಲಿದ್ದಾರೆ. ಆಗ ಇವರು ತಮ್ಮ ಸ್ಥಾನವನ್ನು ತ್ಯಜಿಸಬೇಕಾಗುತ್ತದೆ’ ಎಂದು ಯಾರ ಹೆಸರನ್ನೂ ಉಲ್ಲೇಖಿಸದೇ ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/nia-court-allows-cbi-to-quiz-sachin-waze-on-charges-against-anil-deshmukh-820420.html" itemprop="url">ಪೊಲೀಸ್ ಇಲಾಖೆಗೆ ವಾಪಸ್ ಸೇರಲು ದೇಶಮುಖ್ ₹2 ಕೋಟಿ ಕೇಳಿದ್ದರು: ಸಚಿನ್ ವಾಜೆ </a></p>.<p>ಮಾಜಿ ಗೃಹಸಚಿವ ಅನಿಲ್ ದೇಶ್ಮುಖ್ ವಿರುದ್ಧದ ಆರೋಪಗಳ ಕುರಿತು ತನಿಖೆಯ ಜೊತೆಗೇ ಸಾರಿಗೆ ಸಚಿವ ಅನಿಲ್ ಪರಬ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ತನಿಖೆಯನ್ನು ನಡೆಸುವ ಸಾಧ್ಯತೆಗಳಿವೆ ಎಂದೂ ಅಭಿಪ್ರಾಯಪಟ್ಟರು.</p>.<p>‘ಮಹಾರಾಷ್ಟ್ರದಲ್ಲಿನ ವಿದ್ಯಮಾನಗಳು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಸೂಕ್ತವಾಗಿವೆ‘ ಎಂದು ಅಭಿಪ್ರಾಯಪಟ್ಟ ಪಾಟೀಲ್, ‘ಇದು ನಮ್ಮ ಪಕ್ಷದ ಬೇಡಿಕೆಯಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ಎಲ್ಲ ವಿಚಾರಕ್ಕೂ ಕೇಂದ್ರವನ್ನು ದೂಷಿಸುವುದಾದರೆ, ರಾಜ್ಯದ ಆಡಳಿತವನ್ನು ಕೇಂದ್ರ ಸರ್ಕಾರಕ್ಕೆ ಏಕೆ ವಹಿಸಬಾರದು ಎಂದು ಕೇಳಬೇಕಾಗುತ್ತದೆ’ ಎಂದು ಪಾಟೀಲ್ ಪ್ರಶ್ನಿಸಿದರು.</p>.<p>‘ತನ್ನ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಸಿಬಿಐ ತನಿಖೆಗೆ ಆದೇಶಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿರುವ ಮಾಜಿ ಸಚಿವ ಅನಿಲ್ದೇಶ್ಮುಖ್ ಒಬ್ಬ ಕಪಟಿ‘ ಎಂದು ಪಾಟೀಲ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮುಂದಿನ ಹದಿನೈದು ದಿನಗಳಲ್ಲಿ ಮಹಾರಾಷ್ಟ್ರದ ಇನ್ನೂ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಗುರುವಾರ ಹೇಳಿದ್ದಾರೆ.</p>.<p>‘ನಾನು ಮುಂಬೈ ಪೊಲೀಸ್ ಇಲಾಖೆಯಲ್ಲೇ ಮುಂದುವರಿಯಲು ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ₹2 ಕೋಟಿ ಕೇಳಿದ್ದರು. ಮತ್ತೊಬ್ಬ ಸಚಿವ ಅನಿಲ್ ಪರಬ್ ಅವರು ಗುತ್ತಿಗೆದಾರರಿಂದ ಹಣ ಸಂಗ್ರಹಿಸಿ ತರುವಂತೆ ಹೇಳಿದ್ದರು‘ ಎಂಬುದಾಗಿ ಸಚಿನ್ ವಾಜೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ವಿವರಿಸಲಾಗಿದೆ. ಈ ಪತ್ರ ಬಹಿರಂಗಗೊಂಡ ಬೆನ್ನಲ್ಲೇ, ಚಂದ್ರಕಾಂತ್ ಪಾಟೀಲ್ ಅವರಿಂದ ಇಂಥ ಹೇಳಿಕೆ ಹೊರಬಿದ್ದಿದೆ.</p>.<p>ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್, ‘ಇನ್ನು 15 ದಿನಗಳಲ್ಲಿ ಇಬ್ಬರು ರಾಜ್ಯ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಕೆಲವರು ಈ ಸಚಿವರ ವಿರುದ್ಧ ನ್ಯಾಯಾಲಯದ ಮೆಟ್ಟಲು ಏರಲಿದ್ದಾರೆ. ಆಗ ಇವರು ತಮ್ಮ ಸ್ಥಾನವನ್ನು ತ್ಯಜಿಸಬೇಕಾಗುತ್ತದೆ’ ಎಂದು ಯಾರ ಹೆಸರನ್ನೂ ಉಲ್ಲೇಖಿಸದೇ ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/nia-court-allows-cbi-to-quiz-sachin-waze-on-charges-against-anil-deshmukh-820420.html" itemprop="url">ಪೊಲೀಸ್ ಇಲಾಖೆಗೆ ವಾಪಸ್ ಸೇರಲು ದೇಶಮುಖ್ ₹2 ಕೋಟಿ ಕೇಳಿದ್ದರು: ಸಚಿನ್ ವಾಜೆ </a></p>.<p>ಮಾಜಿ ಗೃಹಸಚಿವ ಅನಿಲ್ ದೇಶ್ಮುಖ್ ವಿರುದ್ಧದ ಆರೋಪಗಳ ಕುರಿತು ತನಿಖೆಯ ಜೊತೆಗೇ ಸಾರಿಗೆ ಸಚಿವ ಅನಿಲ್ ಪರಬ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ತನಿಖೆಯನ್ನು ನಡೆಸುವ ಸಾಧ್ಯತೆಗಳಿವೆ ಎಂದೂ ಅಭಿಪ್ರಾಯಪಟ್ಟರು.</p>.<p>‘ಮಹಾರಾಷ್ಟ್ರದಲ್ಲಿನ ವಿದ್ಯಮಾನಗಳು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಸೂಕ್ತವಾಗಿವೆ‘ ಎಂದು ಅಭಿಪ್ರಾಯಪಟ್ಟ ಪಾಟೀಲ್, ‘ಇದು ನಮ್ಮ ಪಕ್ಷದ ಬೇಡಿಕೆಯಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ಎಲ್ಲ ವಿಚಾರಕ್ಕೂ ಕೇಂದ್ರವನ್ನು ದೂಷಿಸುವುದಾದರೆ, ರಾಜ್ಯದ ಆಡಳಿತವನ್ನು ಕೇಂದ್ರ ಸರ್ಕಾರಕ್ಕೆ ಏಕೆ ವಹಿಸಬಾರದು ಎಂದು ಕೇಳಬೇಕಾಗುತ್ತದೆ’ ಎಂದು ಪಾಟೀಲ್ ಪ್ರಶ್ನಿಸಿದರು.</p>.<p>‘ತನ್ನ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಸಿಬಿಐ ತನಿಖೆಗೆ ಆದೇಶಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿರುವ ಮಾಜಿ ಸಚಿವ ಅನಿಲ್ದೇಶ್ಮುಖ್ ಒಬ್ಬ ಕಪಟಿ‘ ಎಂದು ಪಾಟೀಲ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>