‘ನಾನು ಮುಂಬೈ ಪೊಲೀಸ್ ಇಲಾಖೆಯಲ್ಲೇ ಮುಂದುವರಿಯಲು ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ₹2 ಕೋಟಿ ಕೇಳಿದ್ದರು. ಮತ್ತೊಬ್ಬ ಸಚಿವ ಅನಿಲ್ ಪರಬ್ ಅವರು ಗುತ್ತಿಗೆದಾರರಿಂದ ಹಣ ಸಂಗ್ರಹಿಸಿ ತರುವಂತೆ ಹೇಳಿದ್ದರು‘ ಎಂಬುದಾಗಿ ಸಚಿನ್ ವಾಜೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ವಿವರಿಸಲಾಗಿದೆ. ಈ ಪತ್ರ ಬಹಿರಂಗಗೊಂಡ ಬೆನ್ನಲ್ಲೇ, ಚಂದ್ರಕಾಂತ್ ಪಾಟೀಲ್ ಅವರಿಂದ ಇಂಥ ಹೇಳಿಕೆ ಹೊರಬಿದ್ದಿದೆ.