ಜಮ್ಮು: ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇಗುಲದ ಪರ್ವತದ ಮೇಲಿಂದ ಬಂಡೆಯೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಯಾತ್ರಾರ್ಥಿಗಳು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗೋರಖ್ಪುರದ ಸರ್ವಂತ್ ಸಹಾನಿ (45) ಮತ್ತು ಜಮ್ಮು–ಕಾಶ್ಮೀರದ ನಿರ್ಮಲ್ ಸಿಂಗ್ (18) ಮೃತರು.
ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ದೇಗುಲ ಪ್ರವೇಶಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಬಂಡೆಯೊಂದು ಉರುಳಿ ಬಿದ್ದು ದುರಂತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.