ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಬಾಲಕಿ ಅತ್ಯಾಚಾರ ಕೇಸ್: ಕರ್ತವ್ಯದಲ್ಲಿ ನಿರ್ಲಕ್ಷ್ಯ,ಇಬ್ಬರು ಪೊಲೀಸರ ಅಮಾನತು

ಚಿತ್ರಕೂಟ: ದಲಿತ ಬಾಲಕಿ ಅತ್ಯಾಚಾರ ಪ್ರಕರಣ
Last Updated 14 ಅಕ್ಟೋಬರ್ 2020, 11:32 IST
ಅಕ್ಷರ ಗಾತ್ರ

ಚಿತ್ರಕೂಟ(ಉತ್ತರ ಪ್ರದೇಶ): ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕಾರ್ವಿ ಪೊಲೀಸ್ ಠಾಣೆಯ ಸರಿಯಾಯ ಪೊಲೀಸ್‌ ಔಟ್‌ಪೋಸ್ಟ್‌ ಉಸ್ತುವಾರಿ‌ ಸಬ್‌ ಇನ್‌ಸ್ಪೆಕ್ಟರ್‌ ಅನಿಲ್ ಸಾಹು ಮತ್ತು ಎಸ್‌ಎಚ್‌ಒ ಜೈಶಂಕರ್ ಸಿಂಗ್ ಅವರನ್ನು ಅಮಾನತುಗೊಳಿಸಿರುವುದಾಗಿ ಚಿತ್ರಕೂಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್‌ ತಿಳಿಸಿದ್ದಾರೆ.

ಚಿತ್ರಕೂಟ ವಲಯದ ಐಜಿಪಿ ಕೆ. ಸತ್ಯನಾರಾಯಣ ಮತ್ತು ಜಿಲ್ಲಾಧಿಕಾರಿ ಶೇಷಮಣಿ ಪಾಂಡೆ ಅವರು ಸಂತ್ರಸ್ತೆ ಕುಟುಂಬದವರನ್ನು ಭೇಟಿಯಾಗಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಿತ್ತಲ್ ತಿಳಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮಾಜಿ ಪ್ರಧಾನನೊಬ್ಬರ ಮಗ ಮತ್ತು ಇಬ್ಬರನ್ನು ಮಂಗಳವಾರ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT