<p><strong>ಶ್ರೀನಗರ</strong>: ಇತ್ತೀಚೆಗೆ ಕಾಶ್ಮೀರವನ್ನು ನುಸುಳಿದ್ದ ಪಾಕಿಸ್ತಾನ ಮೂಲದ ಇಬ್ಬರು ಲಷ್ಕರ್–ಎ–ತೈಯಬ(ಎಲ್ಇಟಿ) ಸಂಘಟನೆಯ ಇಬ್ಬರು ಉಗ್ರರನ್ನು ಶುಕ್ರವಾರ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹತ್ಯೆಗೈದಿವೆ.</p>.<p>‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬಂಡಿಪೋರಾ ಜಿಲ್ಲೆಯ ಬ್ರಾರ್ ಸಮೀಪದ ಅರಗಮ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾಪಡೆಗಳ ಪ್ರತಿದಾಳಿಗೆ ಇಬ್ಬರು ಉಗ್ರರು ಹತರಾದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಹತ್ಯೆಯಾದ ಇಬ್ಬರು ಉಗ್ರರು ಗುರುತು ತಕ್ಷಣಕ್ಕೆ ಖಚಿತಪಡಿಸಲು ಸಾಧ್ಯವಿಲ್ಲ. ಮೇ 11ರಂದು ಸಲಿಂದರ್ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯ ವೇಳೆ ಪಾಕಿಸ್ತಾನದ ಈ ಇಬ್ಬರು ಉಗ್ರರು ಪರಾರಿಯಾಗಿದ್ದರು’ ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್ ಹೇಳಿದರು.</p>.<p>ಇದಕ್ಕೂ ಮುನ್ನ ಐಜಿಪಿ ‘ಹತ್ಯೆಯಾದ ಇಬ್ಬರು ಉಗ್ರರು ಪಾಕಿಸ್ತಾನದ ಎಲ್ಇಟಿಗೆ ಸೇರಿದವರಾಗಿದ್ದಾರೆ’ ಎಂದು ಅವರು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಇತ್ತೀಚೆಗೆ ಕಾಶ್ಮೀರವನ್ನು ನುಸುಳಿದ್ದ ಪಾಕಿಸ್ತಾನ ಮೂಲದ ಇಬ್ಬರು ಲಷ್ಕರ್–ಎ–ತೈಯಬ(ಎಲ್ಇಟಿ) ಸಂಘಟನೆಯ ಇಬ್ಬರು ಉಗ್ರರನ್ನು ಶುಕ್ರವಾರ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹತ್ಯೆಗೈದಿವೆ.</p>.<p>‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬಂಡಿಪೋರಾ ಜಿಲ್ಲೆಯ ಬ್ರಾರ್ ಸಮೀಪದ ಅರಗಮ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾಪಡೆಗಳ ಪ್ರತಿದಾಳಿಗೆ ಇಬ್ಬರು ಉಗ್ರರು ಹತರಾದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಹತ್ಯೆಯಾದ ಇಬ್ಬರು ಉಗ್ರರು ಗುರುತು ತಕ್ಷಣಕ್ಕೆ ಖಚಿತಪಡಿಸಲು ಸಾಧ್ಯವಿಲ್ಲ. ಮೇ 11ರಂದು ಸಲಿಂದರ್ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯ ವೇಳೆ ಪಾಕಿಸ್ತಾನದ ಈ ಇಬ್ಬರು ಉಗ್ರರು ಪರಾರಿಯಾಗಿದ್ದರು’ ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್ ಹೇಳಿದರು.</p>.<p>ಇದಕ್ಕೂ ಮುನ್ನ ಐಜಿಪಿ ‘ಹತ್ಯೆಯಾದ ಇಬ್ಬರು ಉಗ್ರರು ಪಾಕಿಸ್ತಾನದ ಎಲ್ಇಟಿಗೆ ಸೇರಿದವರಾಗಿದ್ದಾರೆ’ ಎಂದು ಅವರು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>