ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ಮಸೀದಿ ನಿರ್ಮಾಣ ಜಾಗದ ಮಾಲೀಕತ್ವ: ಇಬ್ಬರು ಸಹೋದರಿಯರು ಕೋರ್ಟ್‌ಗೆ ಮೊರೆ

Last Updated 4 ಫೆಬ್ರುವರಿ 2021, 6:33 IST
ಅಕ್ಷರ ಗಾತ್ರ

ಲಖನೌ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ನೀಡಿರುವ ನಿವೇಶನದ ಮಾಲೀಕತ್ವ ತಮ್ಮದು ಎಂದು ಹೇಳಿಕೊಂಡಿರುವ ದೆಹಲಿ ಮೂಲದ ಇಬ್ಬರು ಸಹೋದರಿಯರು, ಈ ಸಂಬಂಧ ಅಲಹಾಬಾದ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಅರ್ಜಿ ವಿಚಾರಣೆ ಫೆ.8ರಂದು ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ರಾಣಿ ಕಪೂರ್‌ ಅಲಿಯಾಸ್‌ ರಾಣಿ ಬಲೂಜಾ, ರಮಾರಾಣಿ ಪಂಜಾಬಿ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ತಂದೆ ಜ್ಞಾನಚಂದ್ರ ಪಂಜಾಬಿ ಅವರು ದೇಶ ವಿಭಜನೆ ಸಂದರ್ಭದಲ್ಲಿ, 1947ರಲ್ಲಿ ಭಾರತಕ್ಕೆ ಬಂದು, ಅಯೋಧ್ಯೆಯಲ್ಲಿ ನೆಲೆಸಿದರು. ‘ಧನ್ನಿಪುರ ಗ್ರಾಮದಲ್ಲಿ ತಂದೆಗೆ ನಜುಲ್‌ ಇಲಾಖೆಯು 28 ಎಕರೆ ಜಮೀನನ್ನು ನೀಡಿತ್ತು. 5 ವರ್ಷಗಳ ಅವಧಿಗೆ ನೀಡಿದ್ದ ಜಮೀನಿನ ಮಾಲೀಕತ್ವ ನಂತರವೂ ಮುಂದುವರಿಯಿತು. ಕಂದಾಯ ಇಲಾಖೆಯಲ್ಲಿರುವ ಜಮೀನಿಗೆ ಸಂಬಂಧಿಸಿದ ದಾಖಲೆಗಳಲ್ಲಿ ತಂದೆ ಹೆಸರನ್ನು ಸೇರಿಸಲಾಗಿತ್ತು’ ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.

ನಂತರದ ದಿನಗಳಲ್ಲಿ ತಂದೆಯ ಹೆಸರನ್ನು ದಾಖಲೆಗಳಿಂದ ತೆಗೆದು ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ತಂದೆಯವರು ಅಯೋಧ್ಯೆಯಲ್ಲಿನ ನಜುಲ್‌ ಇಲಾಖೆಯ ಹೆಚ್ಚುವರಿ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಬಳಿಕ ಅಧಿಕಾರಿಗಳು ಪುನಃ ತಂದೆಯವರ ಹೆಸರನ್ನು ದಾಖಲೆಗಳಿಂದ ತೆಗೆದು ಹಾಕಿದರು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ. ಇದನ್ನು ಪರಿಗಣಿಸದೇ, 28 ಎಕರೆ ಪೈಕಿ 5 ಎಕರೆಯನ್ನು ವಕ್ಫ್‌ ಬೋರ್ಡ್‌ಗೆ ಹಂಚಿಕೆ ಮಾಡಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ರಾಮಜನ್ಮಭೂಮಿ–ಬಾಬರಿ ಮಸೀದಿ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್‌ ವಕ್ಫ್‌ ಬೋರ್ಡ್‌ಗೆ ಐದು ಎಕರೆ ಜಾಗವನ್ನು 2019ರ ನ.7ರಂದು ನೀಡಲಾಯಿತು. ಈ ನಿವೇಶನದಲ್ಲಿ ಮಸೀದಿ ನಿರ್ಮಾಣಕ್ಕೆ ಜ. 26ರಂದು ಶಿಲಾನ್ಯಾಸ ನೆರವೇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT