ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮಂಗಳವಾರ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಸೇನಾಮೂಲಗಳು ಹೇಳಿವೆ.
ಬಾರಾಮುಲ್ಲಾ ಜಿಲ್ಲೆಯ ‘ನಾಕಾ’ ಬಳಿ ಸೋಮವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಆರ್ಪಿಎಫ್ನ ಇಬ್ಬರು ಯೋಧರು ಹುತಾತ್ಮರಾಗಿದ್ದರು.
ಅದೇ ವೇಳೆ ಉತ್ತರ ಕಾಶ್ಮೀರ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ಹೇಳಿವೆ.
ಉತ್ತರ ಕಾಶ್ಮೀರದಲ್ಲಿರುವ ಲಷ್ಕರೆ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸಾಜದ್ ಹೈದರ್ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾಪಡೆ ಹೊಡೆದುರುಳಿಸಿತ್ತು.ಪ್ರಸ್ತುತ ಪ್ರದೇಶದಲ್ಲಿ ಸೇನಾಪಡೆ ಉಗ್ರರಿಗಾಗಿ ಹುಡುಕಾಟ ಮುಂದುವರಿಸಿದೆ.