<p class="title"><strong>ಮುಂಬೈ</strong>:ಏಕನಾಥ ಶಿಂದೆ-ದೇವೇಂದ್ರ ಫಡಣವೀಸ್ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ ಎಂಬ ಹೇಳಿಕೆ ನಡುವೆಯೂ ಮಹಾರಾಷ್ಟ್ರ ಮಧ್ಯಂತರ ಚುನಾವಣೆಗೆ ಹೋಗುತ್ತಿದೆ ಎಂಬ ತಮ್ಮ ಹೇಳಿಕೆಯನ್ನುಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಭಾನುವಾರ ಪುನರುಚ್ಚರಿಸಿದರು.</p>.<p class="title">‘ಇದು ತುಂಬಾ ಸ್ಪಷ್ಟವಾಗಿದೆ. ಮಹಾರಾಷ್ಟ್ರವು ಮಧ್ಯಂತರ ಚುನಾವಣೆಗೆ ಸಾಗುತ್ತಿದೆ. ನಾನು ಹೇಳಿದ್ದಕ್ಕೆ ಕೆಲವು ಆಧಾರಗಳಿವೆ’ ಎಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಬಂಗಲೆ ಮಾತೋಶ್ರೀಯಲ್ಲಿ ಠಾಕ್ರೆ ಸುದ್ದಿಗಾರರಿಗೆ ತಿಳಿಸಿದರು.</p>.<p class="title">‘ಇದ್ದಕ್ಕಿದ್ದಂತೆ ಮಹಾರಾಷ್ಟ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರೀತಿ ನೋಡುತ್ತೀರಿ. ಅವರು ರಾಜ್ಯಕ್ಕೆ ಎರಡು ಲಕ್ಷ ಕೋಟಿ ರೂಪಾಯಿ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಇವು ಗಾಳಿಯಲ್ಲಿವೆ. ಆದರೆ, ನೆಲದ ಮೇಲಿನ ಯೋಜನೆಗಳು ಗುಜರಾತ್ ಗೆ ಹೋಗುತ್ತವೆ’ ಎಂದು ಠಾಕ್ರೆ ಹೇಳಿದರು.</p>.<p>ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಶನಿವಾರ ಠಾಕ್ರೆ ಅವರು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಹೇಳಿದ್ದರು.</p>.<p>ಬಿಜೆಪಿ ಮತ್ತು ಬಂಡಾಯ ಶಿವಸೇನಾ ಬಣವು ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಿದೆ ಮತ್ತು ಗುಂಪುನ್ನು ಒಟ್ಟಿಗೆ ಇರಿಸಲು ಠಾಕ್ರೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>:ಏಕನಾಥ ಶಿಂದೆ-ದೇವೇಂದ್ರ ಫಡಣವೀಸ್ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ ಎಂಬ ಹೇಳಿಕೆ ನಡುವೆಯೂ ಮಹಾರಾಷ್ಟ್ರ ಮಧ್ಯಂತರ ಚುನಾವಣೆಗೆ ಹೋಗುತ್ತಿದೆ ಎಂಬ ತಮ್ಮ ಹೇಳಿಕೆಯನ್ನುಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಭಾನುವಾರ ಪುನರುಚ್ಚರಿಸಿದರು.</p>.<p class="title">‘ಇದು ತುಂಬಾ ಸ್ಪಷ್ಟವಾಗಿದೆ. ಮಹಾರಾಷ್ಟ್ರವು ಮಧ್ಯಂತರ ಚುನಾವಣೆಗೆ ಸಾಗುತ್ತಿದೆ. ನಾನು ಹೇಳಿದ್ದಕ್ಕೆ ಕೆಲವು ಆಧಾರಗಳಿವೆ’ ಎಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಬಂಗಲೆ ಮಾತೋಶ್ರೀಯಲ್ಲಿ ಠಾಕ್ರೆ ಸುದ್ದಿಗಾರರಿಗೆ ತಿಳಿಸಿದರು.</p>.<p class="title">‘ಇದ್ದಕ್ಕಿದ್ದಂತೆ ಮಹಾರಾಷ್ಟ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರೀತಿ ನೋಡುತ್ತೀರಿ. ಅವರು ರಾಜ್ಯಕ್ಕೆ ಎರಡು ಲಕ್ಷ ಕೋಟಿ ರೂಪಾಯಿ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಇವು ಗಾಳಿಯಲ್ಲಿವೆ. ಆದರೆ, ನೆಲದ ಮೇಲಿನ ಯೋಜನೆಗಳು ಗುಜರಾತ್ ಗೆ ಹೋಗುತ್ತವೆ’ ಎಂದು ಠಾಕ್ರೆ ಹೇಳಿದರು.</p>.<p>ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಶನಿವಾರ ಠಾಕ್ರೆ ಅವರು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಹೇಳಿದ್ದರು.</p>.<p>ಬಿಜೆಪಿ ಮತ್ತು ಬಂಡಾಯ ಶಿವಸೇನಾ ಬಣವು ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಿದೆ ಮತ್ತು ಗುಂಪುನ್ನು ಒಟ್ಟಿಗೆ ಇರಿಸಲು ಠಾಕ್ರೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>