<p><strong>ಮುಂಬೈ: </strong>ನೆರೆ ರಾಜ್ಯವಾದ ಕರ್ನಾಟಕದ ಜೊತೆಗಿನ ಗಡಿ ವಿವಾದಕ್ಕೆ ಸಂಬಂಧಿಸಿದ ಪುಸ್ತಕವೊಂದರ ಬಿಡುಗಡೆಗೆ ಪಕ್ಷಾತೀತವಾಗಿ ಮಹಾರಾಷ್ಟ್ರದ ಎಲ್ಲ ಪಕ್ಷದ ಪ್ರಮುಖ ನಾಯಕರು ಬುಧವಾರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.</p>.<p>ಮರಾಠಿಯಲ್ಲಿ ಇರುವ ‘<strong>ಮಹಾರಾಷ್ಟ್ರ ಕರ್ನಾಟಕ ಸೀಮಾವಾದ್: ಸಂಘರ್ಷ್ ಅನಿ ಸಂಕಲ್ಪ್</strong>’ ಹೆಸರಿನ 530 ಪುಟಗಳ ಈ ಕೃತಿಯು, ಈ ವಿಷಯದ ಕುರಿತು ಮಹಾರಾಷ್ಟ್ರದ ನಿಲುವಿನ ಬಗ್ಗೆ ವಿಸ್ತೃತ ವಿವರಣೆಯನ್ನು ಹೊಂದಿದೆ. ಪುಸ್ತಕವು ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಅವರು ರಚಿಸಿರುವ ವ್ಯಂಗ್ಯಚಿತ್ರಗಳೂ ಒಳಗೊಂಡಿವೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಈ ಕೃತಿಯನ್ನು ಬಿಡುಗಡೆಗೊಳಿಸಲಿದ್ದು, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅಧ್ಯಕ್ಷತೆ ವಹಿಸಲಿದ್ದಾರೆ.ಮಹಾವಿಕಾಸ ಅಘಾಡಿ ಸರ್ಕಾರದ ಪ್ರಮುಖ ನಾಯಕರು ಹಾಗೂ ವಿರೋಧ ಪಕ್ಷವಾದ ಬಿಜೆಪಿಯ ನಾಯಕ ದೇವೇಂದ್ರ ಫಡಣವೀಸ್ ಸೇರಿದಂತೆ ಇತರೆ ನಾಯಕರೂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.</p>.<p>‘1956ರಿಂದ ಹಿಡಿದು 2021ರವರೆಗೆ ಗಡಿ ವಿಷಯಕ್ಕೆ ಸಂಬಂಧಿಸಿದ ವಿಸ್ತೃತ ಮಾಹಿತಿಯನ್ನು ಈ ಪುಸ್ತಕ ಒದಗಿಸಲಿದೆ ಎಂದು ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದ ವಿಶೇಷ ಕರ್ತವ್ಯಾಧಿಕಾರಿ ದೀಪಕ್ ಪವಾರ್ ಹೇಳಿದರು. ‘ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರಮುಖ ನಾಯಕರ ಭಾಷಣ, ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಡೆದ ಚರ್ಚೆಗಳು, ಸುಪ್ರೀಂ ಕೋರ್ಟ್ನಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಿಲುವು ಈ ಕೃತಿಯಲ್ಲಿದ್ದು, ಮುಂದಿನ ಪೀಳಿಗೆಗೆ ಒಂದು ರೀತಿಯ ದಾಖಲೆಯಂತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ನೆರೆ ರಾಜ್ಯವಾದ ಕರ್ನಾಟಕದ ಜೊತೆಗಿನ ಗಡಿ ವಿವಾದಕ್ಕೆ ಸಂಬಂಧಿಸಿದ ಪುಸ್ತಕವೊಂದರ ಬಿಡುಗಡೆಗೆ ಪಕ್ಷಾತೀತವಾಗಿ ಮಹಾರಾಷ್ಟ್ರದ ಎಲ್ಲ ಪಕ್ಷದ ಪ್ರಮುಖ ನಾಯಕರು ಬುಧವಾರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.</p>.<p>ಮರಾಠಿಯಲ್ಲಿ ಇರುವ ‘<strong>ಮಹಾರಾಷ್ಟ್ರ ಕರ್ನಾಟಕ ಸೀಮಾವಾದ್: ಸಂಘರ್ಷ್ ಅನಿ ಸಂಕಲ್ಪ್</strong>’ ಹೆಸರಿನ 530 ಪುಟಗಳ ಈ ಕೃತಿಯು, ಈ ವಿಷಯದ ಕುರಿತು ಮಹಾರಾಷ್ಟ್ರದ ನಿಲುವಿನ ಬಗ್ಗೆ ವಿಸ್ತೃತ ವಿವರಣೆಯನ್ನು ಹೊಂದಿದೆ. ಪುಸ್ತಕವು ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಅವರು ರಚಿಸಿರುವ ವ್ಯಂಗ್ಯಚಿತ್ರಗಳೂ ಒಳಗೊಂಡಿವೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಈ ಕೃತಿಯನ್ನು ಬಿಡುಗಡೆಗೊಳಿಸಲಿದ್ದು, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅಧ್ಯಕ್ಷತೆ ವಹಿಸಲಿದ್ದಾರೆ.ಮಹಾವಿಕಾಸ ಅಘಾಡಿ ಸರ್ಕಾರದ ಪ್ರಮುಖ ನಾಯಕರು ಹಾಗೂ ವಿರೋಧ ಪಕ್ಷವಾದ ಬಿಜೆಪಿಯ ನಾಯಕ ದೇವೇಂದ್ರ ಫಡಣವೀಸ್ ಸೇರಿದಂತೆ ಇತರೆ ನಾಯಕರೂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.</p>.<p>‘1956ರಿಂದ ಹಿಡಿದು 2021ರವರೆಗೆ ಗಡಿ ವಿಷಯಕ್ಕೆ ಸಂಬಂಧಿಸಿದ ವಿಸ್ತೃತ ಮಾಹಿತಿಯನ್ನು ಈ ಪುಸ್ತಕ ಒದಗಿಸಲಿದೆ ಎಂದು ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದ ವಿಶೇಷ ಕರ್ತವ್ಯಾಧಿಕಾರಿ ದೀಪಕ್ ಪವಾರ್ ಹೇಳಿದರು. ‘ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರಮುಖ ನಾಯಕರ ಭಾಷಣ, ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಡೆದ ಚರ್ಚೆಗಳು, ಸುಪ್ರೀಂ ಕೋರ್ಟ್ನಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಿಲುವು ಈ ಕೃತಿಯಲ್ಲಿದ್ದು, ಮುಂದಿನ ಪೀಳಿಗೆಗೆ ಒಂದು ರೀತಿಯ ದಾಖಲೆಯಂತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>