‘1956ರಿಂದ ಹಿಡಿದು 2021ರವರೆಗೆ ಗಡಿ ವಿಷಯಕ್ಕೆ ಸಂಬಂಧಿಸಿದ ವಿಸ್ತೃತ ಮಾಹಿತಿಯನ್ನು ಈ ಪುಸ್ತಕ ಒದಗಿಸಲಿದೆ ಎಂದು ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದ ವಿಶೇಷ ಕರ್ತವ್ಯಾಧಿಕಾರಿ ದೀಪಕ್ ಪವಾರ್ ಹೇಳಿದರು. ‘ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರಮುಖ ನಾಯಕರ ಭಾಷಣ, ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಡೆದ ಚರ್ಚೆಗಳು, ಸುಪ್ರೀಂ ಕೋರ್ಟ್ನಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಿಲುವು ಈ ಕೃತಿಯಲ್ಲಿದ್ದು, ಮುಂದಿನ ಪೀಳಿಗೆಗೆ ಒಂದು ರೀತಿಯ ದಾಖಲೆಯಂತಿದೆ’ ಎಂದರು.