<p><strong>ಮುಂಬೈ:</strong> ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ, ಶಿವ ಸೇನಾ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ.</p>.<p>ಮತ್ತೊಂದೆಡೆ ಮುಖ್ಯಂತ್ರಿ ಏಕನಾಥ ಶಿಂಧೆ ಅವರ ಶಿವ ಸೇನಾದ ಬಂಡಾಯ ಬಣ ಹಾಗೂ ಬಿಜೆಪಿಯು ಉದ್ಧವ್ ಠಾಕ್ರೆ ಹೇಳಿಕೆಯನ್ನು ಅಲ್ಲಗಳೆದಿದ್ದು, ಸರ್ಕಾರವು ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/aap-candidates-for-gujarat-being-decided-by-bjp-congress-986014.html" itemprop="url">ಗುಜರಾತ್ನಲ್ಲಿ ಎಎಪಿ ಅಭ್ಯರ್ಥಿಗಳನ್ನು ನಿರ್ಧರಿಸುವುದು ಬಿಜೆಪಿ: ಕಾಂಗ್ರೆಸ್ </a></p>.<p>ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯಬಹುದು. ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದು ಠಾಕ್ರೆ ಭವಿಷ್ಯ ನುಡಿದರು.</p>.<p>ಅಸಂವಿಧಾನಿಕ ಸರ್ಕಾರ ಜಾರಿಯಲ್ಲಿದೆ. ಸುಪ್ರೀಂಕೋರ್ಟ್ ತೀರ್ಪು ನೀಡಿದಾಗ ಸರ್ಕಾರದ ಭವಿಷ್ಯ ಏನಾಗಲಿದೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ನಾವು ಸಿದ್ಧರಾಗಿರಬೇಕು ಎಂದು ಶಿವ ಸೇನಾ ವಕ್ತಾರ ತಿಳಿಸಿದ್ದಾರೆ.</p>.<p>ಇದಕ್ಕೆ ತಿರುಗೇಟು ನೀಡಿರುವ ಏಕನಾಥ ಶಿಂಧೆ ಬಣದ ವಕ್ತಾರ ದೀಪಕ್ ಕೇಸರ್ಕರ್, ಠಾಕ್ರೆ ಸಿದ್ಧಾಂತದಿಂದ ದೂರ ಸರಿದಿದ್ದು, ಜನರ ಸ್ಥೈರ್ಯ ಹೆಚ್ಚಿಸಲು ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ, ಶಿವ ಸೇನಾ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ.</p>.<p>ಮತ್ತೊಂದೆಡೆ ಮುಖ್ಯಂತ್ರಿ ಏಕನಾಥ ಶಿಂಧೆ ಅವರ ಶಿವ ಸೇನಾದ ಬಂಡಾಯ ಬಣ ಹಾಗೂ ಬಿಜೆಪಿಯು ಉದ್ಧವ್ ಠಾಕ್ರೆ ಹೇಳಿಕೆಯನ್ನು ಅಲ್ಲಗಳೆದಿದ್ದು, ಸರ್ಕಾರವು ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/aap-candidates-for-gujarat-being-decided-by-bjp-congress-986014.html" itemprop="url">ಗುಜರಾತ್ನಲ್ಲಿ ಎಎಪಿ ಅಭ್ಯರ್ಥಿಗಳನ್ನು ನಿರ್ಧರಿಸುವುದು ಬಿಜೆಪಿ: ಕಾಂಗ್ರೆಸ್ </a></p>.<p>ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯಬಹುದು. ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದು ಠಾಕ್ರೆ ಭವಿಷ್ಯ ನುಡಿದರು.</p>.<p>ಅಸಂವಿಧಾನಿಕ ಸರ್ಕಾರ ಜಾರಿಯಲ್ಲಿದೆ. ಸುಪ್ರೀಂಕೋರ್ಟ್ ತೀರ್ಪು ನೀಡಿದಾಗ ಸರ್ಕಾರದ ಭವಿಷ್ಯ ಏನಾಗಲಿದೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ನಾವು ಸಿದ್ಧರಾಗಿರಬೇಕು ಎಂದು ಶಿವ ಸೇನಾ ವಕ್ತಾರ ತಿಳಿಸಿದ್ದಾರೆ.</p>.<p>ಇದಕ್ಕೆ ತಿರುಗೇಟು ನೀಡಿರುವ ಏಕನಾಥ ಶಿಂಧೆ ಬಣದ ವಕ್ತಾರ ದೀಪಕ್ ಕೇಸರ್ಕರ್, ಠಾಕ್ರೆ ಸಿದ್ಧಾಂತದಿಂದ ದೂರ ಸರಿದಿದ್ದು, ಜನರ ಸ್ಥೈರ್ಯ ಹೆಚ್ಚಿಸಲು ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>