<p><strong>ಮುಂಬೈ:</strong> ವಿನಾಯಕ ದಾಮೋದರ್ ಸಾವರ್ಕರ್ ಇರಬಹುದು ಅಥವಾ ಮಹಾತ್ಮಾ ಗಾಂಧಿ ಆಗಿರಬಹುದು, ಬಿಜೆಪಿಯು ಇಬ್ಬರನ್ನೂ ಅರ್ಥ ಮಾಡಿಕೊಂಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.</p>.<p>ಮುಂಬೈಯ ಷಣ್ಮುಖಾನಂದ ಸಭಾಭವನದಲ್ಲಿ ಶಿವ ಸೇನಾದ ವಾರ್ಷಿಕ ದಸರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಾವರ್ಕರ್ ಕುರಿತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಗಾಂಧಿ ಅವರ ಸಲಹೆ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಎಂದು ರಾಜನಾಥ್ ಸಿಂಗ್ ಇತ್ತೀಚೆಗೆ ಹೇಳಿದ್ದರು.</p>.<p><strong>ಓದಿ:</strong><a href="https://www.prajavani.net/india-news/defence-minister-rajnath-singh-says-by-the-advice-of-mahatma-gandhi-v-d-savarkar-filed-mercy-875223.html" itemprop="url">ಗಾಂಧಿ ಸಲಹೆ ಮೇರೆಗೆ ಸಾವರ್ಕರ್ ಕ್ಷಮಾಪಣೆ ಪತ್ರ ಬರೆದಿದ್ದರು: ರಾಜನಾಥ್ ಸಿಂಗ್</a></p>.<p>ದೆಗ್ಲೂರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶಿವ ಸೇನಾದಿಂದ ಬಿಜೆಪಿಗೆ ಪಕ್ಷಾಂತರಗೊಂಡಿರುವವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರ ಬಗ್ಗೆಯೂ ಉದ್ಧವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವು ಉಪಚುನಾವಣೆಗೆ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಿನಾಯಕ ದಾಮೋದರ್ ಸಾವರ್ಕರ್ ಇರಬಹುದು ಅಥವಾ ಮಹಾತ್ಮಾ ಗಾಂಧಿ ಆಗಿರಬಹುದು, ಬಿಜೆಪಿಯು ಇಬ್ಬರನ್ನೂ ಅರ್ಥ ಮಾಡಿಕೊಂಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.</p>.<p>ಮುಂಬೈಯ ಷಣ್ಮುಖಾನಂದ ಸಭಾಭವನದಲ್ಲಿ ಶಿವ ಸೇನಾದ ವಾರ್ಷಿಕ ದಸರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಾವರ್ಕರ್ ಕುರಿತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಗಾಂಧಿ ಅವರ ಸಲಹೆ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಎಂದು ರಾಜನಾಥ್ ಸಿಂಗ್ ಇತ್ತೀಚೆಗೆ ಹೇಳಿದ್ದರು.</p>.<p><strong>ಓದಿ:</strong><a href="https://www.prajavani.net/india-news/defence-minister-rajnath-singh-says-by-the-advice-of-mahatma-gandhi-v-d-savarkar-filed-mercy-875223.html" itemprop="url">ಗಾಂಧಿ ಸಲಹೆ ಮೇರೆಗೆ ಸಾವರ್ಕರ್ ಕ್ಷಮಾಪಣೆ ಪತ್ರ ಬರೆದಿದ್ದರು: ರಾಜನಾಥ್ ಸಿಂಗ್</a></p>.<p>ದೆಗ್ಲೂರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶಿವ ಸೇನಾದಿಂದ ಬಿಜೆಪಿಗೆ ಪಕ್ಷಾಂತರಗೊಂಡಿರುವವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರ ಬಗ್ಗೆಯೂ ಉದ್ಧವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವು ಉಪಚುನಾವಣೆಗೆ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>