ಮುಂಬೈ:ಪ್ರಧಾನಿ ನರೇಂದ್ರ ಮೋದಿ ಅವರು ‘ರೋಜ್ಗಾರ್ ಮೇಳ’ಕ್ಕೆ (ಉದ್ಯೋಗ ಮೇಳ) ಚಾಲನೆ ನೀಡಿ75,000 ಜನರಿಗೆ ನೇಮಕಾತಿ ಪ್ರಮಾಣ ಪತ್ರ ಹಸ್ತಾಂತರಿಸಿದ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದು ರಾಜಕೀಯ ಉದ್ದೇಶದ ನಡೆಯಾಗಿದ್ದು, ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ಅದು ಹೇಳಿದೆ.