ಕೊಚ್ಚಿ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಜಯ ಗಳಿಸಿದರೆ, ಶಬರಿಮಲೆಯಲ್ಲಿ ಮಹಿಳಾ ಪ್ರವೇಶಾತಿಗೆ ಸಂಬಂಧಿಸಿದಂತೆ ಭಕ್ತರ ನಂಬಿಕೆಗಳಿಗೆ ಧಕ್ಕೆಯಾಗದಂತೆ ನಿಯಮ ರೂಪಿಸಲಾಗುವುದು ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಮುಲ್ಲಪ್ಪಳ್ಳಿ ರಾಮಚಂದ್ರನ್ ಹೇಳಿಕೆ ನೀಡಿದ್ದಾರೆ.