ಇದಕ್ಕೂ ಮುನ್ನ, ಕಲಾಪ ಆರಂಭವಾದಾಗ ಅರಣ್ಯ ಸಚಿವರ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದಲ್ಲಿ ಪ್ರಸಾರವಾದ ಧ್ವನಿಮುದ್ರಿಕೆ ತುಣುಕಿನಲ್ಲಿ ಪ್ರಕರಣದ ತನಿಖೆಯಲ್ಲಿ ಸಚಿವರು ಹಸ್ತಕ್ಷೇಪ ಮಾಡಿರುವುದು ಹಾಗೂ ಪ್ರಕರಣವನ್ನು ಇತ್ಯರ್ಥಗೊಳಿಸಲು ಸಂತ್ರಸ್ತೆಯ ತಂದೆಯನ್ನು ಕೇಳಿರುವುದು ಸ್ಪಷ್ಟವಾಗಿದೆ‘ ಎಂದು ಆರೋಪಿಸಿದರು.