ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ಕಣಿವೆಗೆ ಸಂಪರ್ಕ ರೈಲು ಮಾರ್ಗ ವರ್ಷಾಂತ್ಯಕ್ಕೆ ಪೂರ್ಣ: ಅಶ್ವಿನಿ ವೈಷ್ಣವ

Last Updated 25 ಮಾರ್ಚ್ 2023, 19:15 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರ ಕಣಿವೆಗೆ ಇತರ ಭಾಗಗಳೊಂದಿಗೆ ಸಂಪರ್ಕ ಕಲ್ಪಿಸುವ ಉಧಂಪುರ–ಬನಿಹಾಲ್ ರೈಲು ಮಾರ್ಗ ಈ ವರ್ಷ ಪೂರ್ಣಗೊಳ್ಳ ಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಶನಿವಾರ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಶ್ರೀನಗರಕ್ಕೆ ಸಂಪರ್ಕ ಕಲ್ಪಿಸುವ ಈ ಮಾರ್ಗವು ಡಿಸೆಂಬರ್‌ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ರೈಲುಗಳ ಸಂಚಾರಕ್ಕೆ ಮುಕ್ತವಾಗಲಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ಉಧಂಪುರ–ಶ್ರೀನಗರ–ಬರಾಮುಲ್ಲಾ ರೈಲು ಮಾರ್ಗ ಪ್ರಗತಿಯಲ್ಲಿದ್ದು, ಆ ಮಾರ್ಗವೂ ಪೂರ್ಣಗೊಳ್ಳಲಿದೆ ಎಂದು
ತಿಳಿಸಿದ್ದಾರೆ.

ಈ ರೈಲು ಮಾರ್ಗದಲ್ಲಿ ಸಂಚರಿಸಲು ವಿಶೇಷವಾಗಿ ವಂದೇ ಭಾರತ್‌ ರೈಲನ್ನು ವಿನ್ಯಾಸಗೊಳಿಸಲಾಗಿದೆ ಎಂದು ಅವರು
ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT