‘ಹಸುಗಳ ಸಂರಕ್ಷಣೆ, ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಸರ್ಕಾರ ಆಯೋಗ ರಚಿಸಿದೆ. ಭಾರತೀಯರಲ್ಲಿ ಹಸುಗಳ ಬಗ್ಗೆ ಆಸಕ್ತಿ ಮೂಡಿಸುವುದು, ಅವುಗಳು ಹಾಲು ನೀಡುವುದನ್ನು ನಿಲ್ಲಿಸಿದ ನಂತರವೂ ವ್ಯಾಪಾರ ಅವಕಾಶಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಆಯೋಗದ ಉದ್ದೇಶವಾಗಿದೆ. ಆರ್ಥಿಕ, ವೈಜ್ಞಾನಿಕ, ಪರಿಸರ, ಆರೋಗ್ಯ, ಕೃಷಿ ಮತ್ತು ಹಸುವಿನ ಆಧ್ಯಾತ್ಮಿಕ ಪ್ರಸ್ತುತತೆ ಕುರಿತು ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪರೀಕ್ಷೆ ಆಯೋಜಿಸಲಾಗಿದೆ’ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಅವರು ಕುಲಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.